ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಏಪ್ರಿಲ್ 3 ರಂದು ಅಥಣಿಗೆ ಜನಾರ್ಧನ ರೆಡ್ಡಿ ಆಗಮನ- ಬಿಸನಕೊಪ್ಪ

ಅಥಣಿ : ಹುಟ್ಟಿ ಬೆಳೆದು ಮತ್ತು ಪಿಎಸ್ ಐ ಆಗಿ ಅಥಣಿಯಲ್ಲಿ ಕಾರ್ಯನಿರ್ವಹಿಸಿದ ನಾನು ಜನತೆಯೊಂದಿಗೆ ನಿಕಟ ಒಡನಾಟ ಇಟ್ಟುಕೊಂಡಿದ್ದೆ. ನೌಕರಿ ಮಾಡಿ ಬಡ್ತಿ ಪಡೆದು ಐಶಾರಾಮವಾಗಿ ಜೀವನ ನಡೆಸಬಹುದಿತ್ತು. ಆದರೆ ರಾಜಕೀಯದ ಮೂಲಕ ಸಮಾಜ ಅಥವಾ ಜನ ಸೇವೆ ಮಾಡುವ ಉದ್ದೇಶ ಹೊಂದಿರುವ ಕಾರಣಕ್ಕೆ ನಾನು ಸಿಪಿಐ ಸ್ಥಾನಕ್ಕೆ ಕೊಟ್ಟಿದ್ದ ರಾಜೀನಾಮೆ ಅಂಗೀಕಾರವಾಗಿದೆ. ಅಂದಿನಿಂದ ಸಮಾಜ ಕಾರ್ಯಕ್ಕಾಗಿ ರಾಜಕೀಯ ಕ್ಷೇತ್ರ ಆಯ್ಕೆ ಮಾಡಿಕೊಂಡಿರುವೆ ಎಂದು ಮಾಜಿ ಸಿಪಿಐ ಬಸವರಾಜ ಬಿಸನಕೊಪ್ಪ ಅವರು ಹೇಳಿದರು.

ಅವರು ಪಟ್ಟಣದ ತಮ್ಮ ನಿವಾಸದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಕೀಯ ಕ್ಷೇತ್ರದಲ್ಲಿ ನನ್ನ ನೆಲೆ ಗುರುತಿಸಿಕೊಳ್ಳಲು ಮಾಜಿ ಸಚಿವ ಜನಾರ್ಧನ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಥಣಿ ವಿಧಾನ ಸಭಾ ಕ್ಷೇತ್ರದ ಆಕಾಂಕ್ಷಿಯಾಗಿರುವೆ. ನಾನು ರಾಜೀನಾಮೆ ಕೊಟ್ಟ ನಂತರ ಅಥಣಿ ವಿಧಾನಸಭಾ ಕ್ಷೇತ್ರಾದ್ಯಂತ ಸುತ್ತಾಡಿ ಎಲ್ಲ ಧರ್ಮ, ಜಾತಿ, ಮೇಲು ಕೀಳು ಎನ್ನದೇಎಲ್ಲ ವರ್ಗದವರನ್ನು ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಿರುವೆ. ಬರುವ ಸೋಮವಾರ ಏ.3 ರಂದು ಅಧ್ಯಕ್ಷರು ಅಥಣಿಗೆ ಆಗಮಿಸಲಿದ್ದು ಅಂದು ಸಾರ್ವಜನಿಕ ಸಭೆ ಹಾಗೂ ಬೃಹತ್ ರ್ಯಾಲಿ ಕೂಡ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ ಎಂದರು. ಕಲ್ಯಾಣ ಪ್ರಗತಿ ಪಕ್ಷದ ಸಂಘಟನೆ ಬಲ ಪಡೆಸುವ ನಿಟ್ಟಿನಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಅಥಣಿಗೆ ಆಗಮಿಸಲಿದ್ದಾರೆ ಎಂದ ಅವರು ಅವರ ಪ್ರವಾಸದ ನಂತರ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಳ್ಳಲಿದೆ ಎಂದರು.

ವರದಿ : ವಿಶ್ವನಾಥ ಹರೋಲಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

Leave a Reply

Your email address will not be published. Required fields are marked *

ಇದನ್ನೂ ಓದಿ