ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಕ್ಷಿಗಳನ್ನು ಸಂರಕ್ಷಣೆ ಮಾಡಿ ಅಭಿಯಾನ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಕೊಟ್ಟೂರೇಶ್ವರ ಕಾಲೇಜಿನಲ್ಲಿ ದಿನಾಂಕ 29 ಮಾರ್ಚ್ 2023 ರಂದು “ಪಕ್ಷಿಗಳನ್ನು ಸಂರಕ್ಷಿಸಿ” (ಸೇವ್ ಬರ್ಡ್ ) ತಾಪಮಾನ ಹೆಚ್ಚಾಗುತ್ತಿರುವದರಿಂದ ಪ್ರಾಣಿ ಪಕ್ಷಿಗಳಿಗೆ ನೀರು ಕುಡಿಯಲು ಸಹಾಯವಾಗುವ ಉದ್ದೇಶದಿಂದ ಕಾಲೇಜಿನ ಆವರಣದಲ್ಲಿ ಮಣ್ಣಿನಿಂದ ತಯಾರಿಸಿದ ಮಡಿಕೆಯ ಮುಚ್ಚಳದಲ್ಲಿ ನೀರು ಹಾಕುವ ಮುಖಾಂತರ “ಪಕ್ಷಿಗಳನ್ನು ಸಂರಕ್ಷಣೆ ಮಾಡಿ,” ಅಭಿಯಾನವನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಶ್ರೀ. ಸಿದ್ದರಾಮ ಕಲ್ಮಠ ಮತ್ತು ಪ್ರಾಚಾರ್ಯರಾದ ಪ್ರೊ. ಶಾಂತಮೂರ್ತಿ ಬಿ. ಕುಲಕರ್ಣಿ ರವರು ಚಾಲನೆಯನ್ನು ಮಾಡಿದರು.

ಜೀವಸಂಕುಲದಲ್ಲಿ ಪಕ್ಷಿಗಳ ಪಾತ್ರ ಬಹುಮುಖ್ಯವಾತದ್ದು. ಮನುಷ್ಯನ ಅತಿಯಾದ ಸ್ವಾರ್ಥ ಮತ್ತು ಅವೈಜ್ಞಾನಿಕವಾಗಿ ಬೆಳೆಯುತ್ತಿರುವ ನಗರೀಕರಣ, ಅರಣ್ಯನಾಶ, ಜನಸಂಖ್ಯಾ ಸ್ಫೋಟ, ಕೈಗಾರಿಕರಣ ಮುಂತಾದ ಕಾರಣಗಳಿಂದ ಪ್ರಾಣಿ ಮತ್ತು ಪಕ್ಷಿಗಳ ಸಂಕುಲ ನಾಶದ ಅಂಚಿನಲ್ಲಿದೆ.
ಕೆಲವು ಪ್ರಭೇದಗಳು ಕಣ್ಮರೆಯಾಗಿದ್ದು ತುಂಬಾ ಬೇಸರದ ಸಂಗತಿಯಾಗಿದ್ದು ಪ್ರಭೇದಗಳ “ಸಂರಕ್ಷಣೆ ನಮ್ಮೆಲ್ಲರ ಹೊಣೆ” ಆಗಿದ್ದು, ನಮ್ಮ ನಮ್ಮ ಮನೆ, ಹಾಸ್ಟೆಲ್, ಶಾಲಾ ಕಾಲೇಜು ಮತ್ತು ಕಚೇರಿಗಳ ಆವರಣದಲ್ಲಿ ಈ ರೀತಿಯಾದ ಪಕ್ಷಿಗಳ ನೀರುಣಿಸುವ ಸಣ್ಣ ಪ್ರಯತ್ನದಿಂದ ಪರಿಸರ ಸಂರಕ್ಷಣೆಯಲ್ಲಿ ನಮ್ಮನ್ನು ನಾವು ತೊಡಗಿಸುವ ಮುಖಾಂತರ ಬೇರೆಯವರಿಗೆ ಪ್ರೇರಣೆಯಾಗಬಹುದು.

ಇಂಥ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಜೀವ ಸಂಕುಲದ ಬಗ್ಗೆ ಮಾಹಿತಿ ಮತ್ತು ಜಾಗೃತಿಯನ್ನು ಪಕ್ಷಿಗಳಿಗೋಸ್ಕರ ನೀರುಣಿಸುವ ಅಭಿಯಾನವನ್ನು ಚಾಲನೆಗೊಳಿಸಲಾಯಿತು.

ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಈ ರೀತಿಯ ಪರಿಕರಗಳನ್ನು ಅಳವಡಿಸುವ ಮುಖಾಂತರ ಜನಸಾಮಾನ್ಯರಲ್ಲಿ ಕೂಡ ಪಕ್ಷಿ ರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶ ವಾಗಿರುತ್ತದೆ ಎಂದು ಪ್ರಾಣಿ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಪೃಥ್ವಿರಾಜ್ ಸಿ. ಬೆಡ್ಜರ್ಗಿ ಮತ್ತು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ರವಿಕುಮಾರ್ ವಿವರಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ