ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಬಕಾರಿ ಇಲಾಖೆ ಸಿಬ್ಬಂದಿ:₹1.31 ಲಕ್ಷ ಮದ್ಯ ಜಪ್ತಿ

ಯಾದಗಿರಿ ಶಹಾಪುರ ತಾಲ್ಲೂಕಿನ ಹಾಲಬಾವಿ ಕ್ರಾಸ್ ಬಳಿ ಟಾಟಾ ಏಸ್ ಗೂಡ್ಸ್ ಗಾಡಿಯಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ₹ 1.31 ಲಕ್ಷ ಮೌಲ್ಯದ ಸಾರಾಯಿಯನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ಸಾರಾಯಿ ವಶಕ್ಕೆ ಪಡೆದಿದ್ದಾರೆ.
ಕೊಂಗಂಡಿ ಗ್ರಾಮದ ನಿವಾಸಿ ದೇವರಾಜ ಎಂಬ ಆರೋಪಿಗೆ ಬಂಧಿಸಲಾಯಿತು. ಯಾದಗಿರಿ ಜಿಲ್ಲಾ ಅಬಕಾರಿ ಇಲಾಖೆ ನಿರ್ದೇಶಕರ ಮಾರ್ಗ ದರ್ಶನದಲ್ಲಿ ಶಹಾಪುರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಮಲ್ಲಿಕಾರ್ಜುನ ರೆಡ್ಡಿ ಅವರ ನೇತೃತ್ವದಲ್ಲಿ ದಾಳಿ ಮಾಡಿ ವಿವಿಧ ಕಂಪನಿಯ ₹ 1.310 ಲಕ್ಷ ಹಾಗೂ ₹ 4 ಲಕ್ಷ
ಮೌಲ್ಯದ ಸಾರಾಯಿ ಸೇರಿದಂತೆ ಒಟ್ಟು ₹ 5.31 ಲಕ್ಷ ಮೌಲ್ಯದ ಸಾರಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. ಎಂದು ಶಹಾಪುರ ತಾಲ್ಲೂಕಿನ ಅಬಕಾರಿ ಇಲಾಖೆ ನಿರೀಕ್ಷಕ ಧನರಾಜ್ ಹೇಳಿದರು.
ದಾಳಿಯಲ್ಲಿ ಅಬಕಾರಿ ಇಲಾಖೆ ಸಿಬ್ಬಂದಿಗಳಾದ ಸುರೇಶ್ ಮಾಳೇಕರ್, ಜೇಟ್ಟೆಪ್ಪ ಪೂಜಾರಿ, ಚಂದ್ರಶೇಖರ, ವೆಂಕಟೇಶ್, ಭಾಗವಹಿಸಿದ್ದರು.
ಶಹಾಪುರ ಅಬಕಾರಿ ಇಲಾಖೆಯಲ್ಲಿ ದೂರು ದಾಖಲಾಗಿದೆ.

ವರದಿ-ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ