ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವನಸಿರಿ ಫೌಂಡೇಶನ್ ಕಾಳಜಿಯಿಂದ ಮತ್ತೇ ಚಿಗುರೊಡೆದ ಬಸಿರುಗಿಡ

ರಾಯಚೂರು:ಸಿಂಧನೂರು ತಾಲೂಕಿನ ಗೋನವಾರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಕೆಲವು ತಿಂಗಳುಗಳ ಹಿಂದೆ ಊರಿನ ಯುವಕರ ಸಹಕಾರದೊಂದಿಗೆ ಮಳೆಗೆ ಬಿದ್ದ ಬಸರಿ ಗಿಡಕ್ಕೆ ಮತ್ತೆ ಮರುಜೀವ ನೀಡಿದ್ದರು ಇಂದು ಈ ಬಸಿರು ಗಿಡ ಚಿಗೊರೊಡೆದಿದ್ದು ಗ್ರಾಮದ ಎಲ್ಲ ಯುವಕರಿಗೆ, ಶಿಕ್ಷಕರಿಗೆ ಹಾಗೂ ವನಸಿರಿ ಫೌಂಡೇಶನ್ ಗೆ ಸಂತೋಷವುಂಟು ಮಾಡಿದೆ ವನಸಿರಿ ಫೌಂಡೇಶನ್ ಕಾರ್ಯಕ್ಕೆ ಗ್ರಾಮದ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಶಿಕ್ಷಕರಾದ ಹುಲಗಪ್ಪ ಮಾತನಾಡಿ ವನಸಿರಿ ಫೌಂಡೇಶನ್ ಅದ್ಯಕ್ಷರಾದ ಅಮರೇಗೌಡ ಮಲ್ಲಾಪೂರ ಅವರು ನಮ್ಮ ಶಾಲೆಗೆ ಬಂದು ನಮ್ಮ ಊರಿನ ಯುವಕರಾದ ಸಿದ್ದಗೌಡರು ಹಾಗೂ ಊರಿನ ಅನೇಕ ಯುವಕರ ಹಾಗೂ ಶಾಲೆಯ ವಿದ್ಯಾರ್ಥಿಗಳ ಜೊತೆಗೂಡಿ ಮಳೆಗೆ ಬಿದ್ದ ಈ ಬಸಿರು ಗಿಡಕ್ಕೆ ಜೀವ ನೀಡಿದ್ದರು ಇಂದು ನೋಡಲು ಹಸಿರಿನ ಕಳೆ ಬಂದಿದೆ,ಸುಂದರವಾಗಿ ಕಾಣುತ್ತಿದೆ ಇದಕ್ಕೆಲ್ಲ ಕಾರಣರಾದ ವನಸಿರಿ ಫೌಂಡೇಶನ್ ಅದ್ಯಕ್ಷರಿಗೆ ಶಾಲೆಯ ಮುಖ್ಯ ಗುರುಗಳಿಗೆ ಹಾಗೂ ಊರಿನ ಸಿದ್ದನಗೌಡ ಹಾಗೂ ಯುವಕರಿಗೆ ವಿದ್ಯಾರ್ಥಿಗಳಿಗೆ ನಮ್ಮ ಶಾಲಾ ಆಡಳಿತ ವತಿಯಿಂದ ಹೃದಯ ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಊರಿನ ಯುವಕರಾದ ಸಿದ್ದನಗೌಡ, ವನಸಿರಿ ಫೌಂಡೇಶನ್ ಸದಸ್ಯರಾದ ಶರಣೆಗೌಡ ಹೇಡಿಗಿನಾಳ,ವೆಂಕಟರಡ್ಡಿ, ಗಿರಿಸ್ವಾಮಿ ಹೇಡಿಗಿನಾಳ, ವಿರುಭದ್ರಯ್ಯ ಸ್ವಾಮಿ ತಿಮ್ಮಾಪುರ, ಮುದಿಯಪ್ಪ ಹೊಸಳ್ಳಿ ಕ್ಯಾಂಪ್,ಶಾಲಾ ಮುಖ್ಯೋಪಾದ್ಯಾಯರು, ಶಿಕ್ಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ