ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೆ.ಹೊಸಹಳ್ಳಿ ಡೇರೆದ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವ

ರಾಯಚೂರು//ಏ.06 ರಂದು ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಶ್ರೀ ಡೇರೆದ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಕಳಸ ಡೊಳ್ಳು,ವಾದ್ಯಗಳೊಂದಿಗೆ ಅದ್ದೂರಿಯಾಗಿ ಜರುಗಿತು.
ಶ್ರೀ ಡೇರೆದ ನಾಗಲಿಂಗೇಶ್ವರರು ಏಳೆಂಟು ಊರುಗಳಲ್ಲಿ ಪ್ರತ್ಯಕ್ಷನಾಗಿ ಪವಾಡ ಮಾಡಿದ ಪುರುಷರು ಅವರು, ಶ್ರೀ ಗುರು ಜಡಿಸಿದ್ದೇಶ್ವರ ತಾತನವರ ಪರಮ ಭಕ್ತರಾಗಿದ್ದರು, ಬೇಸಿಗೆಯಲ್ಲಿ ಕರ್ಚಿಕಾಯಿಗಳನ್ನು ತೋರಿಸಿ ಪವಾಡ ಮೆರೆದವರು ಕೆ.ಹೊಸಹಳ್ಳಿಯ ಡೇರೆದ ನಾಗಲಿಂಗೇಶ್ವರರು.ಪ್ರತಿ ವರ್ಷ ದವನದ ಹುಣ್ಣಿಮೆ ದಿನದಂದು ನಡೆಯುವ ಇವರ ಜಾತ್ರೆ ಇಂದು ಕೂಡಾ ಸಾವಿರಾರು ಸಂಖ್ಯೆಯ ಭಕ್ತಾಧಿಗಳಿಂದ ಬೆಳಗ್ಗೆಯಿಂದ ಸಂಜೆಯವರೆಗೂ ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡು ಬೆಳಗ್ಗೆ ಶ್ರೀ ನಾಗಲಿಂಗೇಶ್ವರ ಮೂರ್ತಿಗೆ ಅಭಿಷೇಕ,ಪುಷ್ಪಾರ್ಚನೆಯ ಮೂಲಕ ಪ್ರಾರಂಭಗೊಂಡ ಜಾತ್ರಾ ಮಹೋತ್ಸವ ಮತ್ತು ರಥೋತ್ಸವದ ಕಳಸ ಸಾಯಂಕಾಲ 5 ಗಂಟೆಗೆ ಡೊಳ್ಳು, ವಾದ್ಯಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಸುತ್ತಮುತ್ತಲಿನ ಸಾವಿರಾರು ಭಕ್ತರು ತಮ್ಮ ಇಷ್ಟಾರ್ಥಗಳನ್ನು ಈಡೇಸಿಕೊಳ್ಳಲು ಭಕ್ತಿ ಭಾವದಿಂದ ಹಣ್ಣು,ಹೂ, ಕಾಯಿಗಳನ್ನು ದೇವರಿಗೆ ಅರ್ಪಿಸಿದರು.ಇದೇ ಸಂದರ್ಭದಲ್ಲಿ ಗ್ರಾಮದೆಲ್ಲೆಡೆ ಸಡಗರ ಸಂಭ್ರಮಾಚರಣೆ ಮೊಳಗಿತ್ತು ಬೆಳಗ್ಗೆಯಿಂದ ಸಂಜೆಯವರೆಗೆ ನಿರಂತರವಾಗಿ ಪ್ರಸಾದ ವ್ಯವಸ್ಥೆ ನೆರವೇರಿತು. ಸಂಜೆ 7ಗಂಟೆಗೆ ಊರಿನ ಪರಮ ಪೂಜ್ಯರು ಹಾಗೂ ಹಿರಿಯರ ನೇತೃತ್ವದಲ್ಲಿ ರಥೋತ್ಸವ ಅದ್ದೂರಿಯಾಗಿ ನೆರವೇರಿತು.
ಈ ಸಂದರ್ಭದಲ್ಲಿ ಊರಿನ ಪರಮ ಪೂಜ್ಯರು ಹಾಗೂ ಹಿರಿಯರು,ಮಹಿಳೆಯರು ಯುವಕರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸದ್ಭಕ್ತರು ಪಾಲ್ಗೊಂಡಿದ್ದರು.
ವರದಿ// ವೆಂಕಟೇಶ.H. ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ