ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಗ್ಗಿಲ್ಲದೆ ನಡೆಯುತ್ತಿದೆ ಮರಳು ದಂಧೆ… ‘ಮಾಮೂಲಿ’ ಆಸೆಗೆ ಕಣ್ಮುಚ್ಚಿ ಕುಳಿತಿದ್ದಾರ ಅಧಿಕಾರಿಗಳು?!

ಬಳ್ಳಾರಿ/ಸಿರುಗುಪ್ಪಾ:ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದರೂ ಗಣಿ ಇಲಾಖೆ ಅಧಿಕಾರಿಗಳು ಪೊಲೀಸರು, ಕಂದಾಯ ಇಲಾಖೆ, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಮೌನವಾಗಿದ್ದಾರೆ,

ಇವರ ಈ ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಇವರ ಈ ಮೌನ ಕಂಡಾಗ ಪರೋಕ್ಷವಾಗಿ ಇವರು ಇದನ್ನು ಬೆಂಬಲಿಸುವಂತೆ ಕಾಣುತ್ತಿದೆ,ಆದ್ದರಿಂದ ಮರಳು ಮಾಫಿಯಾದವರು ನೀಡುವ ‘ಮಾಮೂಲಿ ಇವರನ್ನೆಲ್ಲ ಮೌನವಾಗಿರುವಂತೆ ಮಾಡಿತ್ತಾ ಎಂಬ ಪ್ರಶ್ನೆ ಸಾರ್ವಜನಿಕರದ್ದಾಗಿದೆ.

ಸಿರುಗುಪ್ಪ ತಾಲೂಕು ಭತ್ತದ ನಾಡು ಎಂದು ಖ್ಯಾತಿ ಪಡೆದಿದ್ದು ಈಗ ತಾಲೂಕಿನಲ್ಲಿ ಅಕ್ರಮ ಮರಳು ದಂಧೆ ಮಾತ್ರ ರಾಜಾರೋಷವಾಗಿ ನಡೆಯುತ್ತಿದೆ ತಾಲೂಕಿನ ಬಾಗೇವಾಡಿ ಗ್ರಾಮದಲ್ಲಿ ರಾತ್ರೋರಾತ್ರಿ ತುಂಗಭದ್ರ ನದಿಯಲ್ಲಿ ಟ್ರ್ಯಾಕ್ಟರ್ ಯಂತ್ರ ಬಳಸಿ ರಾಜಾರೋಷವಾಗಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ ಅಮೂಲ್ಯ ಪ್ರಾಕೃತಿಕ ಸಂಪತ್ತನ್ನು ರಾಜಾರೋಷವಾಗಿ ಕೊಳ್ಳೆ ಹೊಡೆಯುತ್ತಿದ್ದರು, ಅಧಿಕಾರಿಗಳು ಮೌನ ವಹಿಸುತ್ತಿರುವುದು ಸಾರ್ವಜನಿಕರ ಸಂಶಯಕ್ಕೆ ಕಾರಣವಾಗಿದೆ…

ಇಲ್ಲಿ ರಾತ್ರಿ ಸಮಯದಲ್ಲಿ ಅಕ್ರಮವಾಗಿ ನದಿಯ ಗರ್ಭ ಸೀಳಿ ವೈಜ್ಞಾನಿಕವಾಗಿ ಮರಳು ತೆಗೆಯಲಾಗುತ್ತಿದೆ… ಈ ಮರಳಿಗೆ ಉತ್ತಮ ಬೆಲೆ ಇದ್ದು, ದಿನನಿತ್ಯ ಎಷ್ಟೋ ಟ್ರ್ಯಾಕ್ಟರ್ ಮರಳನ್ನು ಯಾವುದೇ ಪರವಾನಿಗೆ ಇಲ್ಲದೆ ಹೊರ ಊರುಗಳಿಗೆ ಸಾಗಿಸಲಾಗುತ್ತದೆ ಎಂದು ಗ್ರಾಮಸ್ಥರು ಹಾಗೂ ಸಾರ್ವಜನಿಕರು ಆರೋಪಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ