ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿಆರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿಯೂ ಬರೆಯಲು ಅನುಕೂಲ ಮಾಡಿಕೊಡಬೇಕು:ಪಿಂಟು ಕಾಂಬಳೆ

ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ,ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ದೇಶದ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರನ್ನು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ಪಕ್ಷದ ಬೀದರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪಿಂಟು ಕಾಂಬಳೆ ಆಗ್ರಹಿಸಿದರು.

ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ ಇದು ಅನ್ಯಾಯ ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ.

ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ ಹಿಂದಿ ಭಾಷೆಯನ್ನು ನಮ್ಮ ತಲೆ ಮೇಲೆ ಹೇರುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ ಇದನ್ನು ಸಹಿಸಲು ಸಾಧ್ಯ ಇಲ್ಲ ದಯವಿಟ್ಟು ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿಯೂ ಬರೆಯಲು ಅನುಕೂಲ ಮಾಡಿಕೊಡಬೇಕು ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರು ಮತ್ತು ನಮ್ಮ ಬೀದರ ಜಿಲ್ಲೆಯ ಸಂಸದರು ಹಾಗೂ ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ಭಗವಂತ ಖೂಬಾ ರವರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕೆಂದು ಒತ್ತಾಯಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ