ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸೊರಬ ಕ್ಷೇತ್ರದಲ್ಲಿ ಮತ್ತೊಮ್ಮೆ ಕುಮಾರ್ ಬಂಗಾರಪ್ಪನವರಿಗೆ ಮಣೆ ಹಾಕಿದ ಬಿಜೆಪಿ

ಶಿವಮೊಗ್ಗ/ಸೊರಬ:ಕೊನೆಗೂ ವಿಧಾನಸಭೆ ಚುನಾವಣಾ ಅಖಾಡಕ್ಕೆ ಬಿಜೆಪಿ ಪಕ್ಷ ತನ್ನ ಹುರಿಯಾಳುಗಳ ಮೊದಲ ಹಂತದ ಪಟ್ಟಿ ಪ್ರಕಟಿಸಿದೆ.
ಕೆಲ ಸ್ವಪಕ್ಷೀಯ ನಾಯಕರ ತೀವ್ರ ಆಕ್ಷೇಪ– ಭಿನ್ನಮತದ ನಡುವೆಯೂ, ಶಾಸಕ ಕುಮಾರ್ ಬಂಗಾರಪ್ಪ ಅವರು ಮತ್ತೆ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕಿಳಿಯುವಲ್ಲಿ ಯಶಸ್ವಿಯಾಗಿದ್ದು ಸೊರಬದಲ್ಲಿ ಹಾಲಿ ಶಾಸಕ ಕುಮಾರ್ ಬಂಗಾರಪ್ಪ ಇದೇ ಅವರಿಗೆ ಟಿಕೆಟ್ ತಪ್ಪುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದ್ದು,ಪಕ್ಷ ಅವರಿಗೆ ಮಣೆ ಹಾಕಿದೆ.ನಮೋ ವೇದಿಕೆ, ಮೂಲ ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರೂ ಪಕ್ಷ ಕುಮಾರ್‌ ಬಂಗಾರಪ್ಪನವರಿಗೆ ಟಿಕೆಟ್ ಪ್ರಕಟಿಸಿದ್ದು, ಇಲ್ಲಿ ಕಾಂಗ್ರೆಸ್ ಪಕ್ಷ ಮಧು ಬಂಗಾರಪ್ಪ ಅವರಿಗೆ ಟಿಕೆಟ್ ನೀಡಿದೆ. ಹೀಗಾಗಿ ಇಲ್ಲಿ ಸೋದರರ ಸವಾಲ್ ಮತ್ತೆ ಎದುರಾಗಲಿದೆ.
ಇನ್ನು ಕುಮಾರ್ ಬಂಗಾರಪ್ಪನ ವಿರೋಧಿ ಪಾಳೆಯದವರಿಗೆ ಹಾಗೂ ನಮೋ ವೇದಿಕೆ ಅವರಿಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸೊರಬದಲ್ಲಿ ಮತ್ತೆ ಕುಮಾರ್ ಬಂಗಾರಪ್ಪನಿಗೆ ಟಿಕೆಟ್ ಕೊಟ್ಟರೆ ನಮೋ ವೇದಿಕೆಯಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ನಮೋ ವೇದಿಕೆಯವರು ಘೋಷಣೆ ಮಾಡಿದ್ದು, ಈ ಮಾತಿಗೆ ಬದ್ಧವಾಗಲಿದ್ದಾರೆಯೇ ಅಥವಾ ಸಂಧಾನಕ್ಕೆ ಬದ್ಧರಾಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

-ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ