ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

10 ಸಾವಿರ ಮಣ್ಣಿನ ಮಡಿಕೆಗಳನ್ನು ಮಾಡಿ ಪಕ್ಷಿಗಳಿಗೆ ನೀರುಣಿಸುತ್ತಿರುವುದು ಶ್ಲಾಘನೀಯ:ಅವಿನಾಶ್ ದೇಶಪಾಂಡೆ

ಸಿಂಧನೂರಿನ ಗೋಮರ್ಶಿಯ ವೀಣಾಶ್ರೀ ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಿದ್ಯಾಶ್ರೀ ಬಿ ಎಮ್ ಪಿ ಶಾಲೆಯ ಆವರಣದಲ್ಲಿ ಪಕ್ಷಿಗಳ ಅರವಟ್ಟಿಗೆ ವನಸಿರಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜೀವಸ್ಪಂದನ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ಅವಿನಾಶ್ ದೇಶಪಾಂಡೆ ಮಾತನಾಡಿ ವನಸಿರಿ ಫೌಂಡೇಶನ್ 10 ಸಾವಿರಕ್ಕೂ ಹೆಚ್ಚು ಮಣ್ಣಿನ ಮಡಿಕೆಗಳನ್ನು ತಯಾರಿಸಿ ಕಾಳು ಮತ್ತು ನೀರುಣಿಸುವ ಕಾಯಕಕ್ಕೆ ಅಮರೇಗೌಡ ಮಲ್ಲಾಪೂರ ಮುಂದಾಗಿರುವುದು ಶ್ಲಾಘನೀಯ ಇವರ ಕಾರ್ಯ ಹಲವಾರು ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಅಮರೇಗೌಡ ಮಲ್ಲಾಪೂರ, ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಅದ್ಯಕ್ಷರಾದ ಪಂಪಯ್ಯಸ್ವಾಮಿ ಸಾಲಿಮಠ,ವಿದ್ಯಾಶ್ರೀ ಬಿ.ಎಮ್.ಶ್ರೀ ಶಾಲೆಯ ಕಾರ್ಯದರ್ಶಿಯಾದ ಶ್ರೀಮತಿ ದ್ರಾಕ್ಷಾಯಣಿ ಮಾಲಿ ಪಾಟೀಲ,ಶಿಕ್ಷಕರಾದ ಬಿ.ಕೊಟ್ರೇಶ,ಬಸನಗೌಡ ಗೋಮರ್ಶಿ,ಜೀವಸ್ಪಂದನ ಕಾರ್ಯದರ್ಶಿ ಅವಿನಾಶ ದೇಶಪಾಂಡೆ, ಗಿರಿಸ್ವಾಮಿ ಹಡಗಿನಾಳ,ಮುದಿಯಪ್ಪ ಹೊಸಳ್ಳಿ ಕ್ಯಾಂಪ್,ವೀರಭದ್ರಯ್ಯ ಸ್ವಾಮಿ ತಿಮ್ಮಾಪೂರ,ವೆಂಕಟರಡ್ಡಿ ಹಡಗಿನಾಳ ಹಾಗೂ ಇನ್ನೂ ಹೆಚ್ಚಿನ ಪರಿಸರ ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ