ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾವಿರಾರು ಬೆಂಬಲಿಗರೊಂದಿಗೆ ಕೆ.ಆರ್.ಪಿ ಪಕ್ಷದ ಅಭ್ಯರ್ಥಿ ದರಪ್ಪ ನಾಯಕ ನಾಮಪತ್ರ ಸಲ್ಲಿಸಿದರು

ಕಳೆದೆರಡು ಚುನಾವಣೆಗಳಲ್ಲಿಯೂ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯದ್ದೇ ಪಾರುಪತ್ತೆ ಇತ್ತು ಜೆಡಿಎಸ್ ಇಲ್ಲಿ ಮಕಾಡೆ ಮಲಗಿದೆ ಆದರೆ ಇದೀಗ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದಾಗಿ ಈ ಬಾರಿಯ ಸಾರ್ವತ್ರಿಕ ಚುನಾವಣೆಯು ತ್ರಿಕೋನ ಸ್ಪರ್ಧೆ ಆಗಬಹುದಾಗಿದೆ

ಇಂದು ವಿಧಾನಸಭಾ ಕ್ಷೇತ್ರದ ಕೆ.ಆರ್.ಪಿ. ಪಕ್ಷದ ಅಧಿಕೃತ ಅಭ್ಯರ್ಥಿ ಟಿ.ಧರಪ್ಪ ನಾಯಕ ಮಾಜಿ ಸಚಿವ ಹಾಗೂ ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಸಂಸ್ಥಾಪಕ ಗಾಳಿ ಜನಾರ್ಧನ ರೆಡ್ಡಿ ಇವರ ಪತ್ನಿ ಅರುಣ ಲಕ್ಷ್ಮಿ ಹಾಗೂ ಬೆಂಬಲಿಗರೊಂದಿಗೆ ತಾಲ್ಲೂಕು ಆಡಳಿತ ಕಛೇರಿಯಲ್ಲಿನ ಚುನಾವಣಾಧಿಕಾರಿ ಕೆ.ಹೆಚ್ ಸತೀಶರಿಗೆ ಶನಿವಾರ ಚುನಾವಣೆಗೆ ತಮ್ಮ ಅಧಿಕೃತ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಪಂ. ಮಾಜಿ ಸದಸ್ಯೆ ಎಚ್.ಸಿ. ರಾಧ ಇವರೂ ಸಹ ಕೆ.ಆರ್.ಪಿ. ಪಕ್ಷದಿಂದ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮುನ್ನ ತಾಲ್ಲೂಕು ಕ್ರೀಡಾಂಗಣದಿಂದ ತೆರದ ವಾಹನದಲ್ಲಿ ಅಪಾರ ಬೆಂಬಲಿಗರೊಂದಿಗೆ ಭರ್ಜರಿ ಮೆರವಣಿಗೆ ನಡೆಸಿದರು.ಕೆ.ಆರ್.ಪಿ.ಪಿ.ಬಳ್ಳಾರಿ ನಗರ ಕ್ಷೇತ್ರದ ಅಭ್ಯರ್ಥಿ ಅರುಣ ಲಕ್ಷ್ಮಿ, ಕೆ.ಆರ್.ಪಿ.ಪಿ.ಜಿಲ್ಲಾಧ್ಯಕ್ಷ ಗೋನಾಳು ರಾಶೇಖರ ಗೌಡ,ಮುಖಂಡ ಅಲಿಖಾನ್ ಇದ್ದರು.

ಈವೇಳೆ ಅರುಣ ಲಕ್ಷ್ಮಿ ಮಾಧ್ಯಮದವರೊಂದಿಗೆ ಮಾತನಾಡಿ ತಮ್ಮ ಅಭಿಪ್ರಾಯ ತಿಳಿಸಿದರು.

ವರದಿ ಎಂ ಪವನ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ