ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚಿತ್ತಾಪುರ ತಾಲೂಕಿನ ಕುಂಬಾರ ಸಮಾಜ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಬೆಂಬಲ

ಚಿತ್ತಾಪೂರ: ಈ ಬಾರಿ ನಡೆಯಲಿರುವ ವಿಧಾನ ಸಭೆಯ ಚುನಾವಣೆಗೆ ಕಾಂಗ್ರೆಸ ಪಕ್ಷದ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರಿಗೆ ನಮ್ಮ ತಾಲೂಕು ಕುಂಬಾರ ಸಮಾಜ ಬೆಂಬಲ ನೀಡಲಾಗುವುದು ಎಂದು ತಾಲೂಕು ಕುಂಬಾರ ಸಮಾಜದ ಅಧ್ಯಕ್ಷರಾದ ಪ್ರಭು ಬೆಣ್ಣೋರ ಹೇಳಿದರು.
ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ನಮ್ಮ ಕುಂಬಾರ ಸಮಾಜಕ್ಕೆ ಶಾಸಕರಾದ ಪ್ರಿಯಾಂಕ್ ಖರ್ಗೆ ಅವರು ನಮ್ಮ ಸಮುದಾಯ ಭವನಕ್ಕೆ ಒಂದು ಎಕರೆ ಜಾಗ ಘೋಷಣೆ ಮಾಡಿದ್ದಾರೆ. ಹಾಗೂ ಐವತ್ತು ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದು ನಮ್ಮ ತಾಲೂಕು ಕುಂಬಾರರ ಸಮಾಜವು ಸಂಪೂರ್ಣವಾಗಿ ಬೆಂಬಲ ನೀಡುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕುಂಬಾರ ಸಮಾಜದ ಗೌರವಾಧ್ಯಕ್ಷರಾದ ಸಾಬಣ್ಣ ಇಟಗಿ, ಉಪಾಧ್ಯಕ್ಷರಾದ ಭೀಮರಾಯ ಕುಂಬಾರ, ಬಂಕಲಗಿ, ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ಕುಂಬಾರ ಡೋಣಾಗಾಂವ್, ಖಜಾಂಚಿ ಭೀಮರಾಯ ಇಟಗಿ,ಬಸವರಾಜ ಕುಂಬಾರ ತರಕಸಫೇಟ, ಗಂಗಾಧರ ಕುಂಬಾರ, ಭೀಮನಹಳ್ಳಿ, ಭೀಮರಾಯ ಕುಂಬಾರ, ಭೀಮನಹಳ್ಳಿ,ಮಹೇಶ್ ಕುಂಬಾರ, ಬೆಳಗುಂಪಿ, ಶಿವಕುಮಾರ ಕುಂಬಾರ ಬೆಣ್ಣೋರ, ಹಾಗೂ ನಮ್ಮ ಕುಂಬಾರ ಸಮಾಜದ ಹಿರಿಯ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಕಲಬುರ್ಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ