ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಾಯುವಿಹಾರಕ್ಕೆ ತೆರಳಿದಾಗ ಗಿಡಮರಗಳ ರಕ್ಷಣೆ ಮಾಡಿ ಮಾನವೀಯತೆ ಮರೆದ ವಿದ್ಯಾರ್ಥಿಗಳು

ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದಿಂದ ವೆಂಕಟೇಶ್ವರ ಕ್ಯಾಂಪ್ ರಸ್ತೆಬದಿಯಲ್ಲಿ ಅರಣ್ಯ ಇಲಾಖೆ ನೆಟ್ಟಿರುವ ಸಸಿಗಳು ಹುಲ್ಲಿನ ಗಾಡಿಗೆ ತಗುಲಿ ಸಸಿಗಳಿಗೆ ಕಟ್ಟಿದ ಕಟ್ಟಿಗೆಗಳು ಮುರಿದು ಬಿದ್ದು ಸುಮಾರು 20ಕ್ಕೂ ಹೆಚ್ಚು ಸಸಿಗಳು ನೆಲಕ್ಕುರುಳಿವೆ. ಇದನ್ನು ಕಂಡ ಇದೇ ರಸ್ತೆಯಲ್ಲಿ ದಿನ ಬೆಳಗ್ಗೆ ವಾಯುವಿಹಾರಕ್ಕೆ ಹೋಗುವ ಶಾಲೆಯ ಹಳೆಯ ವಿದ್ಯಾರ್ಥಿಗಳು ಇವುಗಳನ್ನು ನೋಡಿ ಸಸಿಗಳಿಗೆ ಕಲ್ಲು,ಕಟ್ಟಿಗೆಗಳನ್ನು ಕಟ್ಟಿ ನೆಟ್ಟಗೆ ನಿಲ್ಲಿಸಿ ಹಗ್ಗ ಕಟ್ಟಿ ಗಿಡಮರಗಳ ಮೇಲೆ ಮಾನವೀಯತೆ ತೋರಿದರು.

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ, ಬೆಳವ ಸಿರಿ ಮೊಳಕೆಯಲಿ ಎಂಬಂತೆ ಶಾಲೆಗೆ ಹೋಗುವ ಮಕ್ಕಳು ಇಂದು ಪರಿಸರ ಸಂರಕ್ಷಣೆಯಲ್ಲಿ ತೊಡಗಿ,ರಸ್ತೆಬದಿಯ ಸಸಿಗಳನ್ನು ಕಾಪಾಡುತ್ತಿರುವ ಇಂತಹ ವಿದ್ಯಾರ್ಥಿಗಳಿಗೆ ಗ್ರಾಮದ ಸಾರ್ವಜನಿಕರು,ಪರಿಸರ ಪ್ರೇಮಿಗಳು ಪ್ರಶಂಶೆ ವ್ಯಕ್ತಪಡಿಸಿದರು.ಈ ಒಂದು ಕಾರ್ಯಕ್ಕೆ ವನಸಿರಿ ತಂಡ ಮೆಚ್ಚುಗೆ ವ್ಯಕ್ತಪಡಿಸಿದ್ದು ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ತಿಳಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಅಜಯ ಅಕ್ಷಯ ರಾಕೇಶ್ ರಂಜಿತಾ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ