ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೋವಿ ಸಮಾಜಕ್ಕೆ ಟಿಕೆಟ್ ನೀಡದೆ ದ್ರೋಹವೆಸಗಿದ ಬಿಜೆಪಿ ಮತ್ತು ಕಾಂಗ್ರೆಸ್ ಪರಶುರಾಮ್ ದಂಡಗುಲ್ಕರ

ಕಲಬುರಗಿ/ಜೇವರ್ಗಿ-ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭೋವಿ ಸಮಾಜದ ಗೂಳಿಹಟ್ಟಿ ಶೇಖರ್ ಹೊಸದುರ್ಗ ಮತಕ್ಷೇತ್ರ ಶಾಸಕರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ ಇವರಿಗೆ ಮೋಸ ಮಾಡಿದ ಬಿಜೆಪಿ ಸರ್ಕಾರವು ಇವರಿಗೆ ಟಿಕೆಟ್ ನೀಡದೆ ಕಡೆಗಣಿಸಿದೆ ಅಷ್ಟೇ ಅಲ್ಲದೆ ಪ್ರಭಾವಿ ಮುಖಂಡರು ಅರವಿಂದ್ ಲಿಂಬಾವಳಿ ಮಹದೇವಪುರದ ಮತಕ್ಷೇತ್ರದ ಶಾಸಕರು ಇವರಿಗೂ ಕೂಡ ಟಿಕೆಟ್ ನೀಡಿದೆ ಕಡೆಗಣಿಸಿದೆ ಇದೇ ರೀತಿಯಾಗಿ ಪುಲಿಕೇಶಿ ನಗರದ ಶಾಸಕರಾದ ಅಖಂಡ ಶ್ರೀನಿವಾಸ್ ಮೂರ್ತಿ ಅವರಿಗೂ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ನೀಡದೇ ಕಡೆಗಣಿಸಲಾಗಿದೆ ಕರ್ನಾಟಕ ರಾಜ್ಯದಲ್ಲಿ ಇತಿಹಾಸ ಸೃಷ್ಟಿಸಿ ಅತಿ ಹೆಚ್ಚು ಮತಗಳಿಂದ ಆಯ್ಕೆಯಾಗಿ ಬಂದ ಅಖಂಡ ಶ್ರೀನಿವಾಸ್ ಮೂರ್ತಿ ಅವರಿಗೆ ಮೋಸ ಮಾಡಲಾಗಿದ್ದು ಈ ಮೇಲಿನ ಷಡ್ಯಂತ್ರಗಳನ್ನು ನೋಡಿದಾಗ ಹಿಂದುಳಿದ ಸಮುದಾಯದ ಮುಖಂಡರು ಬೆಳೆಯುವುದಕ್ಕೆ ಕಡಿವಾಣ ಹಾಕಿರುವುದು ನೋಡಿದರೆ ಕಾಣದ ಕೈಗಳ ಕೈವಾಡ ಮೇಲ್ನೋಟಕ್ಕೆ ಕಂಡುಬರುತ್ತದೆ ಆದ್ದರಿಂದ ಭೋವಿ ಸಮಾಜದ ಎಲ್ಲಾ ಮತಬಾಂಧವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕಾಗಿದೆ ನಮ್ಮ ಸಮುದಾಯವನ್ನು ಕಡೆಗಣಿಸಿದ ಬಿಜೆಪಿ ಸರ್ಕಾರಕ್ಕೆ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಮತದಾನದ ಮುಖಾಂತರ ಬಿಸಿ ಮುಟ್ಟಿಸಬೇಕಾಗಿದೆ ಎಂದು ಆರ್ ಟಿ ಈ ಹೊರಟಗಾರ ಪರಶುರಾಮ್ ದಂಡಗುಲ್ಕರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಹಾಗೂ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರಕ್ಕೆ ಬೋವಿ ಸಮುದಾಯದವರು ತಕ್ಕ ಪಾಠ ಕಲಿಸಬೇಕೆಂದು ಮನವಿ ಮಾಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ