ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೌದಳ್ಳಿ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ ಕಾಂಗ್ರೇಸ್ ಶಾಸಕ ಆರ್.ನರೇಂದ್ರ

ಹನೂರು :ನಮ್ಮ ಸರ್ಕಾರದ ಅಭಿವೃದ್ದಿಕಾರ್ಯಗಳೆ ನಮಗೆ ಶ್ರೀರಕ್ಷೆಯಾಗಿದೆ ಅದ್ದರಿಂದ ನಮ್ಮ ಮತಕ್ಷೇತ್ರದ ಜನರು ಅನ್ಯ ಪಕ್ಷಗಳನ್ನು ತೊರೆದು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಅದ್ದರಿಂದ ಮುಂದಿನ ದಿನಗಳಲ್ಲಿ ಗೆಲುವು ನಮ್ಮ ದಾಗತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹನೂರು ವಿಧಾನಸಭಾ ಕ್ಷೇತ್ರದ ಕೌದಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಪ್ರಚಾರ ಕಾರ್ಯ ಮಾಡತ್ತಾ ಮಾತನಾಡಿದ ಅವರು ನಾವು ಈಗಾಗಲೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರಕ್ಕೆ ಬಹುಮತ ನೀಡಲು ಎಲ್ಲಾರು ಹಸ್ತದ ಗುರುತಿಗೆ ಮತ ನೀಡಬೇಕಾಗಿದೆ ಎಂದರು.ಇದೇ ಸಂದರ್ಭದಲ್ಲಿ ಮಾತನಾಡಿದ ವಾರ್ಡಿನ ಸದಸ್ಯ ಪ್ರವೀಣ್ ಕುಮಾರ್ ಕೆಲವು ದಿನಗಳಹಿಂದೆ ಪುದುನಗರ ಗ್ರಾಮದಲ್ಲಿ ಅನ್ಯಪಕ್ಷದ ಮುಖಂಡರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಕಾಂಗ್ರೆಸ್ ಗೆ ಮತ್ತೆ ಹೆಚ್ವಿನ ಶಕ್ತಿಯನ್ನು ತಂದುಕೊಟ್ಟಿದೆ ಮತ್ತು ಯುವಕರನ್ನು ಪಕ್ಷಕ್ಕೆ ವಾಪಸ್ ತರುವಲ್ಲಿ ಯುವ ನಾಯಕ ಪ್ರವೀಣ ಕುಮಾರ್ ಯಶಸ್ವಿಯಾಗಿದ್ದಾರೆ ಇವರ ಸಾರಥ್ಯದಲ್ಲಿ ನಾಗರಾಜು (ಆಟೋ ನಾಗರಾಜ್) ಜೆಡಿಎಸ್ ಮುತ್ತು ಸೇರಿದಂತೆ ಹಲವು ಮುಖಂಡರು ಅನ್ಯ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಉದ್ಯಮಿ ಪೊನ್ನಾಚಿ ರಂಗಸ್ವಾಮಿ .ವಿಷ್ಣುಕುಮಾರ್,ಕಾಮರಾಜು , ಜವಾದ್ ಅಹಮದ್ ,ಚೆಲುವರಾಜು,ಕುಮಾರ್ ,ಮಾದೇಶ್ ,ಸ್ವಾಮಿ,ಷಫಿ,ಪುಟ್ಟವಿರನಾಯ್ಕ ,ಮೆಹಬೂಬ್ ,ಗೊವಿಂದರಾಜು ,ಸತೀಶ್ , ಸೇರಿದಂತೆ ವಿವಿಧ ಗ್ರಾಮದ ಮುಖಂಡರು ಹಾಜರಿದ್ದರು,

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ