ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹುಣಶ್ಯಾಳ ಗ್ರಾಮದ ಮುಸ್ಲಿಂ ಸಮುದಾಯ ಜೆಡಿಎಸ್ ಅಭ್ಯರ್ಥಿ ರಾಜುಗೌಡ್ರರನ್ನು ಬೆಂಬಲಿಸುತ್ತೆ

ವಿಜಯಪುರ ತಾಲ್ಲೂಕಿನ ದೇವರಹಿಪ್ಪರಗಿ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರ ಪರ
ತಾಲೂಕಿನ ಹುಣಶ್ಯಾಳ ಕೆರೂಟಗಿ ಕದರಾಪುರ ವಂದಾಲ ಸೇರಿದಂತೆ ವಿವಿಧ ಕಡೆ ಜಿಲ್ಲಾ ಉಪಾಧ್ಯಕ್ಷ ಮಸ್ಯಾಕಸಾಬ ಚೌದರಿ ಹುಣಶ್ಯಾಳ ಗ್ರಾಮದ ಜೆಡಿಎಸ್ ಮುಖಂಡ ಹುಸೇನಸಾಬ ನಾಗಾವಿ ಜೆಡಿಎಸ್ ತಾಲೂಕು ಅಧ್ಯಕ್ಷ ಸಾಯಬಣ್ಣ ಬಾಗೇವಾಡಿ ಭರ್ಜರಿ ಪ್ರಚಾರ ನಡೆಸಿದರು
ಹುಣಶ್ಯಾಳ ಗ್ರಾಮದಲ್ಲಿ ಬೃಹತ್ ಮೆರವಣಿಗೆ ಕಾರ್ಯಕ್ರಮ ನಡೆಯತು ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡ ಮುಸ್ಲಿಂ ಸಮುದಾಯದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಮುಸಲ್ಮಾನರನ್ನು ಹತ್ತಿರ ಸೇರಿಸುವುದಿಲ್ಲ, ಕಾಂಗ್ರೆಸ್ ಪಕ್ಷ ಮುಸಲ್ಮಾನರ ಬೆನ್ನ ಮೇಲೆ ಕೈಯಿಟ್ಟು ಅವರಿಗೆ ದ್ರೋಹ ಬಗೆದಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು, ಪ್ರಾದೇಶಿಕ ಪಕ್ಷ ಜೆಡಿಎಸ್ ಮಾತ್ರ ಮುಸಲ್ಮಾನರ ಹಿತಕಾಯಲ್ಲಿದ್ದು, ಜೆಡಿಎಸ್ ವರಿಷ್ಠರಾದ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡಿದ್ದಾರೆ ಹಾಗೂ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವುದಾಗಿ ಹೇಳಿದ್ದಾರೆ ಅವರ ಕೈ ಬಲಪಡಿಸಲು ಎರಡು ಬಾರಿ ಸೋತಿರುವ ಕ್ಷೇತ್ರದ ಸರಳ ಸಜ್ಜನಿಕೆ ಜಾತ್ಯತೀತ ವ್ಯಕ್ತಿಯಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರನ್ನು ಮುಸ್ಲಿಂ ಸಮುದಾಯ ಬೆಂಬಲಿಸುವ ಮೂಲಕ ಈ ಬಾರಿ ಜೆಡಿಎಸ್ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ ಎಂದು ಎಂದು ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷರಾದ ರಿಯಾಜ್ ಯಲಿಗಾರ ಹೇಳಿದರು.

ಈ ವೇಳೆ ಜೆಡಿಎಸ್ ಪಕ್ಷದ ಯುವ ಘಟಕದ ಅಧ್ಯಕ್ಷರಾದ ಮುನೀರ್ ಅಹ್ಮದ್ ಮಳಖೇಡ
ಜಿಲ್ಲಾ ಉಪಾಧ್ಯಕ್ಷ ಮಸ್ಯಾಕಸಾಬ ಚೌದರಿ ಹುಣಶ್ಯಾಳ ಗ್ರಾಮದ ಜೆಡಿಎಸ್ ಮುಖಂಡ ಹುಸೇನಸಾಬ ನಾಗಾವಿ ನಜೀರಸಾಬ ಕಲಕೇರಿ ಲಾಲಸಾಬ ನಾಗಾವಿ ಸೇರಿದಂತೆ ಅನೇಕ ಸಮುದಾಯದ ಮುಖಂಡರು ರಾಜುಗೌಡರನ್ನು ಬೆಂಬಲಿಸುವುದಾಗಿ ಮುಖಂಡರು ಪದಾಧಿಕಾರಿಗಳು ಕಾರ್ಯಕರ್ತರು ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಭಾಗವಹಿಸಿದ್ದರು.
ವರದಿ-ಖಾದರಬಾಷ ಮೇಲಿನಮನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ