ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾವಿರಾರು ಜನರ ಸಮ್ಮುಖದಲ್ಲಿ ಬೃಹತ್ ರೋಡ್ ಶೋ

ಹನೂರು: ಜೆಡಿಎಸ್ ಅಭ್ಯರ್ಥಿ ಎಂ.ಆರ್.ಮಂಜುನಾಥ್ ಪರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಸಾವಿರಾರು ಜನರ ಸಮ್ಮುಖದಲ್ಲಿ ಬೃಹತ್ ರೋಡ್ ಶೋ ಮೂಲಕ ಮತಪ್ರಚಾರ ನಡೆಸಿದರು.

ಪಟ್ಟಣದ ಹೊರವಲಯದ ಅಜ್ಜಿಪುರ ಮುಖ್ಯ ರಸ್ತೆಯಲ್ಲಿರುವ ಹೆಲಿಪ್ಯಾಡ್ ಗೆ ಹೆಲಿಕ್ಯಾಪ್ಟರ್ ಮುಖಾಂತರ ಆಗಮಿಸಿದ ಗಣ್ಯರು ಪಟ್ಟಣದ ಅನ್ನಪೂರ್ಣೇಶ್ವರಿ ಹೋಟೆಲ್ ವೃತ್ತದಿಂದ ಸಾವಿರಾರು ಕಾರ್ಯಕರ್ತರ ನೂಕು ನುಗ್ಗಲಿನ ನಡುವೆ ತೆರೆದ ವಾಹನದಲ್ಲಿ ಸಾಗಿದರು ನಂತರ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಖಾಸಗಿ ಬಸ್ ನಿಲ್ದಾಣದ ಬಳಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು ಹನೂರು ಪಟ್ಟಣದಲ್ಲಿ ನಡೆಯುತ್ತಿರುವ ಜೆಡಿಎಸ್ ಚುನಾವಣಾ ಪ್ರಚಾರದ ರೋಡ್ ಶೋ ಐತಿಹಾಸಿಕವಾದದ್ದು ಎಂದು ಬಣ್ಣಿಸಿ ಮಾತು ಮುಂದುವರಿಸಿದರು. ಜೆಡಿಎಸ್ ಅಭ್ಯರ್ಥಿ ಎಂ.ಆರ್.ಮಂಜುನಾಥ್ ಅವರನ್ನು ಶಾಸಕರನ್ನಾಗಿ ಕಳುಹಿಸಿ ನಾನು ಈ ಜಿಲ್ಲೆಗೆ ಮಂತ್ರಿ ಮಾಡುತ್ತೇನೆ. ಮೇಕೆದಾಟು ಯೋಜನೆಯನ್ನು ಸಾಕಾರಗೊಳಿಸಿ ಈ ಭಾಗದ ಜನತೆಯ ಕಲ್ಯಾಣಕ್ಕೆ ಶ್ರಮಿಸುತ್ತೇನೆ ಹನೂರು ಕ್ಷೇತ್ರವನ್ನು ದತ್ತು ಪಡೆದು ರಾಮನಗರ ಜಿಲ್ಲೆಯಂತೆ ಅಭಿವೃದ್ಧಿ ಮಾಡಲಾಗುವುದು. ಮಂಜುನಾಥ್ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊನೆ ಗಳಿಗೆಯಲ್ಲಿ ಸ್ಪರ್ಧಿಸಿ ಅಲ್ಪ ಮತಗಳಿಂದ ಸೋತಿದ್ದರು ಕೂಡ ಕ್ಷೇತ್ರ ಬಿಟ್ಟು ಹೋಗದೆ ಕಳೆದ 5 ವರ್ಷಗಳಿಂದ ನಿರಂತರವಾಗಿ ಜನರ ಕಷ್ಟ ಸುಖಗಳಿಗೆ ಭಾಗಿಯಾಗಿ ಮನೆ ಮಗನಂತಿದ್ದಾರೆ. ನನ್ನ ಬಳಿ ಯಾವಾಗಲೂ ಚರ್ಚಿಸುತ್ತಾರೆ ಕ್ಷೇತ್ರದಲ್ಲಿ ಉದ್ಯೋಗ ಕಲ್ಪಿಸಬೇಕೆಂದು. ಈ ನಿಟ್ಟಿನಲ್ಲಿ ನಾನು ಮಂಜುನಾಥ್ ಅವರ ಜೊತೆ ಕೈಜೋಡಿಸಿ ಹನೂರು ಭಾಗದಲ್ಲಿ ಕೈಗಾರಿಕೆಯನ್ನು ತೆರೆಯುವ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುತ್ತೇನೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ವರ್ಷಕ್ಕೆ ಐದು ಸಿಲೆಂಡರ್ ಗಳನ್ನು ಉಚಿತವಾಗಿ ನೀಡಲಾಗುವುದು. 65 ವರ್ಷ ಮೇಲ್ಪಟ್ಟ ವೃದ್ಧರಿಗೆ ಮಾಸಿಕ 5,000 ರೂ.ಗಳು, ವಿಧವೆಯರಿಗೆ ಮದುವೆಯಾಗದ ಹೆಂಗಸಿರಿಗೆ 2500 ರೂ.ಗಳನ್ನು ನೀಡಲಾಗುವುದು. ರೈತರ ಕೃಷಿ ಅಭಿವೃದ್ಧಿಗೆ ಮುಂಗಾರಿನ ವೇಳೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕಾಗಿ ಪ್ರತಿ ಎಕರೆಗೆ 10,000ಗಳನ್ನು ಒದಗಿಸಲಾಗುವುದು. ಭೂಮಿ ಇಲ್ಲದ ಪ್ರತಿ ತಿಂಗಳು 2000 ಗಳನ್ನು ನೀಡಲಾಗುವುದು. ರೈತರು ಕೃಷಿ ಕಾರ್ಮಿಕರು ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸಲು ಎಲ್ ಕೆ ಜಿ ಇಂದ 12ನೇ ತರಗತಿವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಖಾಸಗಿ ಶಿಕ್ಷಣದ ಮಾದರಿಯಲ್ಲಿ ಉಚಿತ ಶಿಕ್ಷಣವನ್ನು ನೀಡಲಾಗುವುದು. ಪಂಚರತ್ನ ಐದು ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಸ್ಪಷ್ಟ ಬಹುಮತದ ಅವಶ್ಯಕತೆ ಇರುವುದರಿಂದ ನಾಡಿನ ಜನತೆ ಜೆಡಿಎಸ್ ಅನ್ನು ಬೆಂಬಲಿಸಬೇಕು. ಬಿಜೆಪಿ ಕಾಂಗ್ರೆಸ್ ಜೊತೆಗೂಡಿ ಈ ಒಂದು ಕಾರ್ಯವನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದ ಅವರು ಹನೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಆರ್.ಮಂಜುನಾಥ್ ಅವರನ್ನು ರಾಜ್ಯದ ಇತರೆ ವಿಧಾನಸಭಾ ಕ್ಷೇತ್ರಗಳಿಗಿಂತ ಹೆಚ್ಚಿನ ಬಹುಮತದ ಮೂಲಕ ಆಶೀರ್ವದಿಸಬೇಕೆಂದು ಮನವಿ ಮಾಡಿದರು.

ಡಾ.ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಮಾತನಾಡಿ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಕೋಮುವಾದಿ ಸರ್ಕಾರವಾಗಿದೆ. ಇವರು ಪ್ರತಿ ದಿನ ಎರಡು ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಾರೆ.ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣ ಮಾಡುವುದು, ನಿರಪರಾಧಿಗಳನ್ನು ಜೈಲಿಗೆ ಕಳಿಸುವುದು ಇವರ ಕೆಲಸವಾಗಿದೆ. ರಾಜ್ಯ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ 40% ಭ್ರಷ್ಟ ಸರ್ಕಾರಗಳಾಗಿವೆ. ಇದನ್ನು ತೊಲಗಿಸಲು ಈ ಬಾರಿ ಜನತೆ ಜೆಡಿಎಸ್ ಅನ್ನು ಬೆಂಬಲಿಸಬೇಕು. 2024 ರ ಚುನಾವಣೆಯಲ್ಲಿ ಇವರು ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾವಣೆ ಮಾಡುತ್ತಾರೆ.ದ್ವೇಷ ಭಾಷಣದ ಮೂಲಕ ಮುಸ್ಲಿಮರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಮುಸ್ಲಿಮರ ರಕ್ಷಣೆ ಆಗಬೇಕಾದರೆ ಮುಸ್ಲಿಂ ಸಮುದಾಯದವರು ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿ. ಜೆಡಿಎಸ್ ಮೀಸಲಾತಿ ಹಾಗೂ ಮುಸ್ಲಿಮರ ರಕ್ಷಣೆಯನ್ನು ಮಾಡುತ್ತದೆ ಎಂದರು.

ಜೆಡಿಎಸ್ ಜನಸಾಗರ: ಜೆಡಿಎಸ್ ವರಿಷ್ಠ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್ ಪರ ಮತಯಾಚನೆಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ವಿವಿಧಡೆಯಿಂದ ಅಪಾರ ಜನಸಂಖ್ಯೆ ಪಟ್ಟಣಕ್ಕೆ ಬಂದಿದ್ದರು ಎತ್ತ ನೋಡಿದರು ಜನಸಾಗರವೇ ಕಂಡುಬಂದಿತು ಜೆಡಿಎಸ್ ಬಾವುಟ ಹಾರಟ ಪಟ್ಟಣದ ಎಲ್ಲಡೆ ಕಂಡು ಬಂದಿತು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ