ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಾಡಿ ಪಟ್ಟಣದಲ್ಲಿ ಮತಬೇಟೆ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಮನೆ ಮಗನಾದ ನಾನು ವಾಡಿ ನಾಗರಿಕರಲ್ಲಿ ನನ್ನ ಮನವಿ ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಆರಿಸಿ ತರಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಮನವಿ ಮಾಡಿದರು.
ಚಿತ್ತಾಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರ ಪರ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ ನಾನು ಕಲಬುರಗಿ ಜಿಲ್ಲೆಯ ಮಣ್ಣಿನ ಮಗನೇ, ಅಷ್ಟೇ ಅಲ್ಲದೆ ಕರ್ನಾಟಕದ ಮಣ್ಣಿನ ಮಗನು ಹೌದು ,ನೀವು ಹೇಗೆ ಗುಜರಾತ್ ಅಹಮದಾಬಾದ್ ನ ಮಗ ಎಂದು ಗುಜರಾತ್ ರಾಜ್ಯದಲ್ಲಿ ಮತ ಪಡೆದಿದ್ದಾರಾ? ಅದೇ ರೀತಿಯಾಗಿ ನಾನು ಕರ್ನಾಟಕ ರಾಜ್ಯದ ಮಣ್ಣಿನ ಮಗ ಎಂದು, ಕರ್ನಾಟಕ ಜನತೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಮತ ಕೇಳುತ್ತೆನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟಾಂಗ್ ನೀಡಿದರು.
ಅರವತ್ತು ವರ್ಷದಲ್ಲಿ ದೇಶಕ್ಕೆ ಏನು ಕೊಡುಗೆ ಕೊಟ್ಟಿದ್ದಿರಾ. ಎಂಬ ಬಿಜೆಪಿಗರ ಪ್ರಶ್ನೆಗೆ ಸ್ವಾತಂತ್ರ್ಯ ಪೂರ್ವದಲ್ಲಿ ಯಾವ ಶಾಲಾ ಕಟ್ಟಡಗಳು ಇರಲಿಲ್ಲ ನಂತರ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಶಾಲಾ ಕಟ್ಟಡ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡಿದ್ದೇವೆ, ನಾವು ಕಟ್ಟಿಸಿದ ಶಾಲೆಗಳಲ್ಲಿ ನೀವು ಓದಿದ್ದು,ನಿಮ್ಮನ್ನು ಬೆಳೆಸಿದ್ದು ನಾವು ನಿಮಗೆ ಮುಖ್ಯಮಂತ್ರಿ ಪ್ರಧಾನ ಮಂತ್ರಿ ಮಾಡಿದ್ದು ನಾವು ಇದಕ್ಕಿಂತ ಮೇಲಾಗಿ ಏನು ಮಾಡಬೇಕು ಎಂದು ತಿರುಗೇಟು ನೀಡಿದರು.
ಈ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತು.

ವರದಿ: ರಾಜಶೇಖರ ಮಾಲಿ ಪಾಟೀಲ್ ಕಲಬುರ್ಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ