ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಮ್ಮ ಮನೆತನದ ಅಭಿಮಾನಕ್ಕೆ ಮತದಾನ ನೀಡಿದ ಜನತೆಗೆ ಕೃತಜ್ಙತೆ :ಡಾಕ್ಟರ್ ಪ್ರೀತನ್

ಹನೂರು: ವಿಧಾನಸಭಾ ಕ್ಷೇತ್ರದಲ್ಲಿ ದಶಕಗಳಿಗೂ ಹೆಚ್ಚು ಕಾಲ ಜನರ ಸೇವೆಯನ್ನು ಮಾಡಿದ ನಮ್ಮ ಕುಟುಂಬಕ್ಕೆ ಕ್ಷೇತ್ರದ ಜನತೆ ನೀಡಿರುವ ಮತಕ್ಕೆ ನಾನು ಅಭಾರಿಯಾಗಿದ್ದೇನೆ ಎಂದು ಡಾಕ್ಟರ್ ಪ್ರೀತನ್ ನಾಗಪ್ಪ ತಿಳಿಸಿದರು. ಹನೂರು ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನಗೆ 35 ಸಾವಿರ ಮತಗಳನ್ನು ನೀಡಿ ಆಶೀರ್ವದಿಸಿದ ಮತದಾರರಿಗೆ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರ ಮುಖಂಡರುಗಳಿಗೆ ನಾನು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ .
ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಕಾರ್ಯಕರ್ತರು ಮುಖಂಡರುಗಳು ಹಗಲಿರಳು ಶ್ರಮಿಸಿದ್ದರು ಆದರೂ ಕಾರಣಾಂತರಗಳಿಂದ 35 ಸಾವಿರ ಮತಗಳನ್ನು ನೀಡಿ ಆಶೀರ್ವದಿಸಿದ ಮತದಾರರ ಪ್ರೀತಿ ವಿಶ್ವಾಸಕ್ಕೆ ನಾನೆಂದಿಗೂ ಚಿರಋಣಿಯಾಗಿದ್ದು ನಾನು ಧನ್ಯವಾದಗಳನ್ನು ತಿಳಿಸುತ್ತೇನೆ.
ಪಕ್ಷದ ಸಂಘಟನೆಗೆ ಪರಿಶ್ರಮ ಪಟ್ಟಿದ್ದರು ಸಹ ಕೆಲವು ಕಾರಣಾಂತರಗಳಿಂದ ಇಂದು ನಾವು ಸೋತಿರಬಹುದು ಆದರೆ ಇದರಿಂದ ಯಾರು ಧೃತಿಗೆಡದೆ ಧೈರ್ಯವಾಗಿ ಮುಂದಿನ ದಿನಗಳಲ್ಲೂ ಪಕ್ಷ ಸಂಘಟನೆ ಮಾಡಬೇಕು. ಸೋಲು ಗೆಲುವು ಎರಡು ಶಾಶ್ವತವಲ್ಲ ಮುಂದೇನು ಸಹ ಒಳ್ಳೆ ಮನಸ್ಸಿನಿಂದ ಬಿಜೆಪಿ ಕಾರ್ಯಕರ್ತರು ಪಕ್ಷದ ಪರವಾಗಿ ಸಂಘಟನೆ ಮಾಡುತ್ತ ಸಾಗಬೇಕು ಎಂದು ತಿಳಿಸಿದರು .

ವರದಿ :ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ