ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಗ್ರಹಾರ ವಾರ್ಡಿನ ರಾಮಾನುಜ ರಸ್ತೆಯ ಉದ್ಯಾನವನಕ್ಕೆ ರತ್ನಾಕರ್ ಹೆಸರು ಇಡಲು ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹ

ಮೈಸೂರು:ಹಿರಿಯ ಚಲನಚಿತ್ರ ಹಾಸ್ಯ ಕಲಾವಿದ ರತ್ನಾಕರ ಅವರ ಹೆಸರನ್ನು ಮೈಸೂರಿನ ರಾಮಾನುಜ ರಸ್ತೆಯ ಉದ್ಯಾನ ವನಕ್ಕೆ ನಾಮಕರಣ ಮಾಡಬೇಕೆಂದು ಕನ್ನಡಪರ ಹೋರಾಟಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಮೈಸೂರಿನ ಮಗ ಹಾಸ್ಯ ಕಲಾವಿದ ರತ್ನಾಕರ್ ರವರ ಕೊಡುಗೆ ಅಪಾರವಾದದ್ದು.
ಅವರು ಮೈಸೂರಿನ ರಾಮಾನುಜ ರಸ್ತೆಯಲ್ಲಿ ವಾಸವಾಗಿದ್ದುದು ಎಲ್ಲರಿಗೂ ತಿಳಿದಿರುವ ವಿಷಯ.ಅವರು ವಿಧಿವಶರಾಗಿ ಹತ್ತಾರು ವರುಷಗಳೇ ಕಳೆದಿದೆ.ರಾಮಾನುಜ ರಸ್ತೆಯಲ್ಲಿ 3/4 ಉದ್ಯಾನವನಗಳು ಇದ್ದರೂ ಸಹ ಅವರ ಹೆಸರನ್ನು ನಾಮಕರಣ ಮಾಡಲೇ ಇಲ್ಲ ಎಂದು ತೇಜಸ್ವಿ ಬೇಸರ ವ್ಯಕ್ತಪಡಿಸಿದ್ದಾರೆ.
ಇಂತಹ ಹಿರಿಯ ಚಲನಚಿತ್ರ ಕಲಾವಿದರಿಗೆ ಸಂಭಂದ ಪಟ್ಟ ಅಧಿಕಾರಿಗಳು ಮತ್ತು ನಗರ ಪಾಲಿಕೆ ಸದಸ್ಯರು ಅಪಮಾನ ಮಾಡಿದ್ದಾರೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ರತ್ನಾಕರ್ ರವರ ಹೆಸರನ್ನು ಒಂದು ಉದ್ಯಾನವನಕ್ಕೆ ನಾಮಕರಣ ಮಾಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸ್ಥಳೀಯ ನಿವಾಸಿಗಳೊಂದಿಗೆ ಉದ್ಯಾನವನದಲ್ಲಿ ಉಪವಾಸ ಸತ್ಯಾಗ್ರಹ ಹಾಗೂ ಪ್ರತಿಭಟನೆ ಮಾಡುವುದಾಗಿ ತೇಜಸ್ವಿ ಎಚ್ಚರಿಕೆ ನೀಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ