ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿದ್ದರಾಮಯ್ಯ ಸಂಪುಟದಲ್ಲಿ ಮಂತ್ರಿ ಸ್ಥಾನ ಪಡೆದ ಶರಣಬಸಪ್ಪಗೌಡ ದರ್ಶನಾಪುರ

ಯಾದಗಿರಿ:ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ ಪಡೆದ ಶಹಾಪುರ ತಾಲೂಕಿನ ಸಗರನಾಡಿನ ಅಭಿವೃದ್ಧಿ ಹರಿಕಾರ ಎಂದೇ ಹೆಸರಾದ,ನುಡಿದಂತೆ ನಡೆಯುವ ಶರಣಬಸಪ್ಪಗೌಡ ದರ್ಶನಪುರ ಇವರು ಶನಿವಾರದಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
5 ನೇ ಬಾರಿ ಶಾಸಕರಾಗಿ ಇವರು ಮೂರನೇ ಬಾರಿಗೆ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಪಡೆದಿದ್ದಾರೆ. ಈ ಮೂಲಕ 7 ವರ್ಷಗಳ ನಂತರ ಯಾದಗಿರಿ ಜಿಲ್ಲೆಗೆ ಮತ್ತೊಮ್ಮೆ ಮಂತ್ರಿ ಸ್ಥಾನ ದೊರೆತಿದೆ.
ಹೈಕಮಾಂಡ್ ಮೂಲಕ ಮಂತ್ರಿ ಸ್ಥಾನ ಗಿಟ್ಟಿಸಿಕೊಳ್ಳವ ಮೂಲಕ ತಮ್ಮ ವರ್ಚಸ್ಸು ಹೆಚ್ಚಿಸಿಕೊಂಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಹೆಚ್ಚು ಪ್ರಾಬಲ್ಯ ಹೊಂದಿರುವ ಇವರು 7 ವರ್ಷಗಳ ಬಳಿಕ ಶರಣಬಸಪ್ಪಗೌಡ ದರ್ಶನಾಪುರ ಇವರಿಗೆ ಮಂತ್ರಿಯಾಗುವ ಕನಸು ನನಸಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಯಾದಗಿರಿ, ರಾಯಚೂರು, ಕಲಬುರ್ಗಿ ಈ ಭಾಗದ ಹಿಡಿತ ಸಾಧಿಸಲು ರೆಡ್ಡಿ ಸಮುದಾಯದ ಮತ ಪೆಟ್ಟಿಗೆಗೆ ಕೈ ಹಾಕಿದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಇಬ್ಬರೂ ಲೆಕ್ಕಾಚಾರವಾಗಿದೆ.ಇದರಿಂದಲೇ ಶರಣಬಸಪ್ಪಗೌಡ ದರ್ಶನಪುರ ಅವರಿಗೆ ಮಂತ್ರಿ ಸ್ಥಾನ ಕೊಟ್ಟಿದ್ದಾರೆ ಎನ್ನುವುದು ನೋಡಿದರೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಕಾಕತಾಳೀಯ ಎಂಬಂತೆ ತಂದೆ ಬಾಪುಗೌಡ ದರ್ಶನಾಪುರ ನಿರ್ವಹಿಸಿದ ಖಾತೆ ಮಗ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಒಲಿದು ಬಂದಿದೆ.ರಾಮಕೃಷ್ಣ ಹೆಗಡೆಯವರ ಸಚಿವ ಸಂಪುಟದಲ್ಲಿ ಸಣ್ಣ ಕೈಗಾರಿಕೆ ಖಾತೆ ಈಗ ಮಗ ದರ್ಶನಪುರ ಹಂಚಿಕೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಕೈಗಾರಿಕೆ ವಲಯದಲ್ಲಿ ಅಭಿವೃದ್ಧಿ ಹೊಂದಲಿದೆ. ಮತ್ತು ಸಾರ್ವಜನಿಕ ಉದ್ಯಮ ಖಾತೆ ಕೂಡ ಇವರಿಗೆ ಒಲಿದು ಬಂದಿದೆ.
ವರದಿ-ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ