ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೇವರ್ಗಿ ಲೋಕೋಪಯೋಗಿ ಇಲಾಖೆಯಲ್ಲಿ ಭ್ರಷ್ಟಾಚಾರ

ಕಲಬುರ್ಗಿ:ಜೇವರ್ಗಿ ತಾಲೂಕಿನ ಯಾಳವಾರ ಕ್ರಾಸ್ ದಿಂದ-ಇಜೇರಿವರಗೆ ಹೋಗುವ ರಸ್ತೆ ತುಂಬಾ ಕಳಪೆ ಮಟ್ಟದ್ದಾಗಿದೆ ಹಾಗೂ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ ಎಂದು ಗ್ರಾಮಸ್ಥರು ತಮ್ಮ ನೋವು ಹಂಚಿಕೊಂಡರು ಜೇವರ್ಗಿಯಿಂದ- ಯಡ್ರಾಮಿಗೆ ತೆರಳುವ ಗ್ರಾಮೀಣ ಮುಖ್ಯ ರಸ್ತೆ ಕಾಮಗಾರಿ ನೆನೆಗುದಿಗೆ ಬಿದ್ದಿದೆ,
ಕಳೆದ ಎರಡು ವರ್ಷಗಳ ಹಿಂದೆ ಲೋಕೋಪಯೋಗಿ ಇಲಾಖೆಯಿಂದ ಗ್ರಾಮದ ರಸ್ತೆ ದುರಸ್ತಿ ಮಾಡಲಾಗಿತ್ತು. ಆದರೆ ಈ ರಸ್ತೆ ಸಂಪೂರ್ಣವಾಗಿ ಕಳಪೆ ಮಟ್ಟದ ಕಾಮಗಾರಿಯಾಗಿದ್ದು ಸಂಪೂರ್ಣ ಹಾಳಾಗಿದ್ದು ಈ ಭಾಗದ ಗ್ರಾಮಸ್ಥರು ಶಾಸಕ ಅಜೇಯ್ ಸಿಂಗ್ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.
2021/22 ನೇ ಸಾಲಿನ ಈ ರಸ್ತೆಯ ಎರಡು ಬದಿಯಲ್ಲಿ ಗಿಡ,ಜಾಲಿಮರಗಳನ್ನು ಕಡಿಯಲು ಟೆಂಡರ್ ಕರೆಯಲಾಗಿತ್ತು ಮತ್ತೆ ರಸ್ತೆ ದುರಸ್ತಿಗೊಳಿಸುವ ಸಲುವಾಗಿ ಈ ಭಾಗದ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಬೇಕು ಎಂದು ಶಾಸಕ ಅಜಯ್ ಸಿಂಗ್ ಅವರಿಗೆ ಒತ್ತಾಯಿಸಿದ್ದಾರೆ.
ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ,ಮದರಿ, ಯನಗುಂಟಾ,ನರಿಬೋಳ,ಮಲ್ಲಾ (ಕೆ.), ಬಿರಾಳ (ಬಿ),ಬಿರಾಳ(ಕೆ),ಹೋತಿನಮಡಿ, ಹೊನ್ನಾಳ,ರಾಂಪೂರ,ಕಾಸರಭೋಸಗಾ, ಮುತ್ತಿಕೊಡವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಎಸ್.ಎಚ್.ಡಿ.ಪಿ 2008 ರಲ್ಲಿ ಕಾಮಗಾರಿ ಸಂಪೂರ್ಣ ಮಾಡಲಾಗಿತ್ತು ಆದರೆ ಈ ರಸ್ತೆಗಳು ಸುಧಾರಣೆಗೊಂಡಿಲ್ಲ ಎಂದು ಬಿರಾಳ.ಕೆ. ಗ್ರಾಮದ ಪರಮೇಶ್ವರ್ ಬಿರಾಳ ಆರೋಪ ಮಾಡಿದರು.

ವರದಿ-ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ