ಭದ್ರಾವತಿ: ನ್ಯೂಟೌನ್ ಠಾಣೆ ಪೊಲೀಸರು 3 ಜನ ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಬೆಳ್ಳಿ, ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.
ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣಗಳಲ್ಲಿ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಗಂಜಿಗೆರೆ ಗ್ರಾಮದ ಲೋಕೇಶ್(50), ರಂಗನಾಥ್(45) ಮತ್ತು ಗುಬ್ಬಿ ತಾಲೂಕಿನ ಕೋಡಿನಾಗೇನಹಳ್ಳಿ ಗ್ರಾಮದ ವಿಜಯ್(33) ಎಂಬ 3 ಮಂದಿ ಆರೋಪಿಗಳನ್ನು ಬಂಧಿಸಿ, ಒಟ್ಟು 39 ಗ್ರಾಂ. ತೂಕದ ಚಿನ್ನದ ಆಭರಣಗಳನ್ನು ಮತ್ತು 17 ಗ್ರಾಂ ತೂಕದ ಬೆಳ್ಳಿಯ ಕಾಲು ಚೈನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ಕುಮಾರ್, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ಕುಮಾರ್ ಭೂಮರೆಡ್ಡಿ ಹಾಗೂ ಭದ್ರಾವತಿ ಪೊಲೀಸ್ ಉಪಾಧೀಕ್ಷಕ ಜಿತೇಂದ್ರಕುಮಾರ್ ದಯಾಮ ರವರ ಮಾರ್ಗದರ್ಶನದಲ್ಲಿ ಹಳೇನಗರ ಪೊಲೀಸ್ ಠಾಣಾಧಿಕಾರಿ ಶರಣಪ್ಪ ನೇತೃತ್ವದಲ್ಲಿ ನ್ಯೂಟೌನ್ ಪೊಲೀಸ್ ಠಾಣೆಯ ಎಎಸ್ಐ ಟಿ ಪಿ ಮಂಜಪ್ಪ, ಎಚ್.ವೆಂಕಟೇಶ್, ಠಾಣಾ ಸಿಬ್ಬಂದಿಗಳಾದ ರಂಗನಾಥ್, ಪ್ರವೀಣ್ ಕುಮಾರ್, ತೀರ್ಥಲಿಂಗಪ್ಪ ನಗರ ವೃತ್ತ ನೀರಿಕ್ಷಕರ ಕಚೇರಿ ಸಿಬ್ಬಂದಿ ಸುನೀಲ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
