ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅತಿಥಿ ಶಿಕ್ಷಕರಂತೆ ಶಾಲೆಯಲ್ಲಿ ಕರಾಟೆ ಶಿಕ್ಷಕರನ್ನು ಸರ್ಕಾರ ನೇಮಿಸಿಕೊಳ್ಳಲಿ ಗ್ರಾಮೀಣ ಅಭಿವೃದ್ಧಿ ಸಂಘಟನಾ ಹೋರಾಟಗಾರ ಮಾಳಪ್ಪ ಪೂಜಾರಿ


ಯಡ್ರಾಮಿ/ರಾಜ್ಯದಲ್ಲಿ ಇದುವರೆಗೂ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ ಅದೇ ರೀತಿಯಾಗಿ ಸರ್ಕಾರ ಪ್ರತಿಯೊಂದು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕರಾಟೆ ಶಿಕ್ಷಕರನ್ನು ಅತಿಥಿ ಶಿಕ್ಷಕರನಾಗಿ ಪರಿಗಣಿಸಿ ನೇಮಿಸಿಕೊಳ್ಳಬೇಕು ಇದರಿಂದ ಇತರ ಚಟುವಟಿಕೆ ಜೊತೆ ಮಕ್ಕಳಲ್ಲಿ ಆತ್ಮಬಲ ಹೆಚ್ಚಿಸುವುದರ ಜೊತೆ ಕರಾಟೆ ಕಲೆಯನ್ನು ಕೂಡ ಸಮರ್ಥವಾಗಿ ಕಲಿಸಿದಂತಾಗುತ್ತದೆ ಅಲ್ಲದೆ ಮಕ್ಕಳಲ್ಲಿ ಆತ್ಮಬಲ ಸಾಮಾಜಿಕ ಪ್ರಜ್ಞೆ ಕಲಿಸಿಕೊಟ್ಟಂತಾಗುತ್ತದೆ ಆದ್ದರಿಂದ ವಿದ್ಯಾರ್ಹತೆಯ ಆಧಾರದ ಮೇಲೆ ಅನುಭವಿ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು ಎಂದು ಯಡ್ರಾಮಿ ತಾಲೂಕಿನ ಗ್ರಾಮೀಣ ಅಭಿವೃದ್ಧಿ ಹೋರಾಟಗಾರ ಮಾಳಪ್ಪ ಪೂಜಾರಿ ಅವರು ಕರಾಟೆ ಶಿಕ್ಷಕರೊಂದಿಗೆ ಸಮಾಲೋಚಿಸಿ ಆದಷ್ಟು ಶೀಘ್ರದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸುವದಾಗಿ ತಿಳಿಸಿದ್ದಾರೆ ಅಲ್ಲದೆ ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಅಪರಾಧ ಪ್ರಕಾರಣಗಳು ಹೇಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಹಾಗೂ ಕಾಲೇಜುಗಳಲ್ಲಿ ಕರಾಟೆ ಕಲೆಯನ್ನು ಕಲಿಸುವುದರಿಂದ ಅಪಾಯಕಾರಿಕ ಸನ್ನಿವೇಶದಲ್ಲಿ ಮಕ್ಕಳು ರಕ್ಷಣೆ ಮಾಡಿಕೊಳ್ಳಲಿದ್ದಾರೆ ಆದ್ದರಿಂದ ಸರಕಾರ ಕುಲಂಕುಶವಾಗಿ ಪರಿಶೀಲಿನೆ ಮಾಡಿ ಕರಾಟೆ ಶಿಕ್ಷಕರನ್ನು ಆದಷ್ಟು ಶೀಘ್ರದಲ್ಲಿ ನೇಮಿಸಿಕೊಳ್ಳಬೇಕು ಇದರಿಂದ ಪ್ರತಿಯೊಂದು ಶಾಲೆಯ ಹೆಣ್ಣು ಮಕ್ಕಳು ಸಮರ್ಥ ರೀತಿಯಲ್ಲಿ ಸದೃಢವಾಗಿ ಧೈರ್ಯವಂತರಾಗಿ ಬೆಳೆಯಲಿದ್ದಾರೆ ಆದ್ದರಿಂದ ಸರ್ಕಾರ ಎಲ್ಲಾ ಶಿಕ್ಷಣದಂತೆ ಕರಾಟೆ ಶಿಕ್ಷಣಕ್ಕೂ ಆದ್ಯತೆ ಕೊಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ