ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಳವಾರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸುವಂತೆ ಮಾಳು ಪೂಜಾರಿ ಆಗ್ರಹ


ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮವು ಸುಮಾರು ಎರಡೂವರೆ ಸಾವಿರ ಮತದಾರರನ್ನು ಹೊಂದಿದ ಗ್ರಾಮವಾಗಿದೆ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಈ ಗ್ರಾಮದಲ್ಲಿ ಇದುವರೆಗೂ ಕಟ್ಟಕಡೆಯ ಬಡವರಿಗೆ ಮೂಲಭೂತ ಸೌಲಭ್ಯಗಳಾಗಲಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಇಲ್ಲದಿರುವುದು ದುರ್ದೈವದ ಸಂಗತಿ ಹಾಗೂ ನಾಚಿಕೆಗೇಡಿತನದ ಸಂಗತಿ ಅಷ್ಟೇ ಅಲ್ಲದೆ ಈ ಗ್ರಾಮದಲ್ಲಿ ಗರ್ಭಿಣಿ ಸ್ತ್ರೀಯರಿಗಾಗಿ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಇರುವುದಿಲ್ಲ ಅನಿವಾರ್ಯದ ಸಂದರ್ಭದಲ್ಲಿ ಈ ಬಿಳವಾರದ ಗ್ರಾಮದ ಗ್ರಾಮಸ್ಥರು ಜೇವರ್ಗಿ ಹಾಗೂ ಶಹಾಪುರ,ಕಲ್ಬುರ್ಗಿಯಂತಹ ನಗರಗಳಿಗೆ ಹೋಗಬೇಕಾಗುತ್ತದೆ ಇದುವರೆಗೂ ಹಲವಾರು ಜನಪ್ರತಿನಿಧಿಗಳು ಚುನಾವಣೆಯ ಸಮಯದಲ್ಲಿ ಪೋಳ್ಳು ಭರವಸೆಗಳನ್ನು ಕೊಟ್ಟು ಹೋಗಿದ್ದಾರೆ ಮತ್ತೆ ಬರುವುದು ಚುನಾವಣೆಯ ಸಮಯದಲ್ಲಿ ಈ ಗ್ರಾಮಸ್ಥರ ಗೋಳನ್ನು ಕೇಳುವವರು ಯಾರು ಇದುವರೆಗೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಹೆಣ್ಣು ಮಕ್ಕಳಿಗಾಗಿ ಈ ಗ್ರಾಮದಲ್ಲಿ ಹೈಟೆಕ್ ಸಾರ್ವಜನಿಕ ಶೌಚಾಲಯ ಇಲ್ಲದಿರುವುದು ನಾಚಿಕೆಗೇಡಿತನದ ಸಂಗತಿ ಹೆಸರಿಗೆ ಮಾತ್ರ ಮಾಡಿಸಿ ಕೊಡ್ತೀನಿ ಅಂತಾರೆ ಇದುವರೆಗೂ ಯಾವ ಅಧಿಕಾರಿಗಳು ತಲೆಕೆಡಿಸಿಕೊಂಡಿರುವುದಿಲ್ಲ ಇನ್ನು ಮುಂದಾದರು ಎಚ್ಚೆತ್ತುಕೊಂಡು ಬಿಳವಾರ ಗ್ರಾಮದ ಗ್ರಾಮಸ್ಥರ ಸಮಸ್ಯೆಯನ್ನು ಆಲಿಸುವರೋ ಇಲ್ಲವೋ ಕಾದು ನೋಡಬೇಕಾಗಿದೆ ಮುಂದೆ ಬರುವಂತ ದಿನಗಳಲ್ಲಿ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ಗ್ರಾಮೀಣ ಅಭಿವೃದ್ಧಿ ಹೋರಾಟಗಾರ ಮಾಳಪ್ಪ ಪೂಜಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ