ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಗ್ರಹಾರ ವೃತ್ತದಲ್ಲಿ ಇಮ್ಮಡಿ ಪುಲಿಕೇಶಿ ಪುತ್ಥಳಿ ನಿರ್ಮಾಣಕ್ಕೆ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹ

ಮೈಸೂರು:ಮೈಸೂರಿನ ಹೃದಯ ಭಾಗದಲ್ಲಿರುವ ಅಗ್ರಹಾರ ವೃತ್ತದಲ್ಲಿ_
ಇಡೀ ಭರತ ಖಂಡ ಆಳಿದ ವೀರ ಕನ್ನಡಿಗ ದಕ್ಷಿಣ ಪಥೇಶ್ವರ “ಇಮ್ಮಡಿ ಪುಲಿಕೇಶಿಯ” ಬೃಹತ್ ಪುತ್ಥಳಿ ನಿರ್ಮಾಣ ಮಾಡಬೇಕೆಂದು ಕನ್ನಡಪರ ಹೋರಾಟಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಅನೇಕ ದಶಕಗಳಿಂದ ಹೋರಾಟ, ಚಳವಳಿಗಳ ಮೂಲಕ ಇಡೀ ರಾಜ್ಯದ ಗಮನ ಸೆಳೆದಿರುವ ಅಗ್ರಹಾರ ವೃತ್ತದಲ್ಲೇ ಪುತ್ಥಳಿ ಪ್ರತಿಷ್ಠಾಪಿಸಲು ಶೀಘ್ರವೆ ಕ್ರಮ ಕೈಗೊಳ್ಳಬೇಕೆಂದು‌ ಅವರು ಒತ್ತಾಯಿಸಿದ್ದಾರೆ.
ಮೈಸೂರು ಅನೇಕ ಹೋರಾಟಗಾರರನ್ನು ರಾಜ್ಯಕ್ಕೆ ಕೊಡುಗೆಯಾಗಿ ಕೊಟ್ಟ ಜಿಲ್ಲೆಯಾಗಿದೆ.ಅಗ್ರಹಾರ ವೃತ್ತದಲ್ಲಿ ಸದ್ಯ ಯಾವುದೇ ಪ್ರತಿಮೆ ಇಲ್ಲ,ಈ ವೃತ್ತದಲ್ಲಿ ಪ್ರತಿಭಟನೆಗಳು,ಚಳವಳಿಗಳು ನಡೆಯುತ್ತಲೇ ಇರುತ್ತವೆ.ಸ್ವತಃ ಈಗಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಮೈಸೂರಿನವರೇ ಆಗಿದ್ದು ಅಗ್ರಹಾರ ವೃತ್ತ ಅವರಿಗೆ ಚಿರಪರಿಚಿತವಾಗಿದೆ.ಅವರು ಸಹ ಕನ್ನಡ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದವರು,ಆದ ಕಾರಣ ಕೂಡಲೇ ಇಮ್ಮಡಿ ಪುಲಿಕೇಶಿಯ ಬೃಹತ್ ಪುತ್ಥಳಿ ನಿರ್ಮಾಣ ಮಾಡಬೇಕೆಂದು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ