ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪೇದೆ ಕುಟುಂಬಕ್ಕೆ 30 ಲಕ್ಷ ರೂಪಾಯಿ:ಗೃಹ ಸಚಿವ ಡಾ.ಪರಮೇಶ್ವರ ಭರವಸೆ

ಕಲಬುರ್ಗಿ:ಜೇವರ್ಗಿ ತಾಲೂಕಿನ ನೆಲೋಗಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಕರ್ತವ್ಯದ ಮೇಲಿದ್ದ ಮುಖ್ಯಪೇದೆ ಮಯೂರ್ ಚವ್ಹಾಣ್ ಅವರ ಮೇಲೆ ಹರಿದು ಬಂದ ಟ್ರ್ಯಾಕ್ಟರ್ ನಿಂದ ಸ್ಥಳದಲ್ಲೇ ಪೇದೆ ಸಾವು ಈ ಘಟನೆ ತಿಳಿದ ಶಾಸಕ ಅಜೇಯ್ ಸಿಂಗ್ ಅವರು ಖಂಡಿಸಿ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದು ಹೇಳಿದರು.
ಈ ಘಟನೆ ಕುರಿತು ಪತ್ರಿಕಾ ಹೇಳಿಕೆ ನೀಡಿ ಘಟನೆ ತಿಳಿದ ಕೂಡಲೇ ರಾಜ್ಯದ ಗೃಹ ಸಚಿವ ಡಾ.ಪರಮೇಶ್ವರ ಅವರೊಂದಿಗೆ ಮಾತುಕತೆ ನಡೆಸಿರುವೆ ತಕ್ಷಣಕ್ಕೆ ಗೃಹ ಸಚಿವರು ಮೃತ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಭರವಸೆ ನೀಡಿದರು ಮೃತ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಮನವಿ ಮಾಡಲಾಗಿದೆ. ಅಕ್ರಮ ಮರಳು ಗಣಿಗಾರಿಕೆ ಅವಕಾಶ ಕೊಡಬಾರದು ಎಂದು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಡಲಾಗಿದೆ.
ಈ ಘಟನೆ ನಡೆದ ಕೂಡಲೇ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಧಿಕಾರಿ ಇಶಾಪಂತ್ ಹಾಗೂ ಜಿಲ್ಲಾಧಿಕಾರಿ ಯಶವಂತ ಗುರುಕರ ಇಬ್ಬರೂ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ ಇನ್ನು ಮುಂದೆ ಇಂತಹಾ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಲಾಗಿದೆ ಎಂದು ಮಾಹಿತಿ ಬಂದಿದೆ.

ವರದಿ ರಾಜಶೇಖರ ಮಾಲಿ ಪಾಟೀಲ್ ಕಲಬುರ್ಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ