ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮನುಕುಲಕ್ಕಾಗಿ ಯೋಗ ಕಾರ್ಯಕ್ರಮಮಾನಸಿಕ,ದೈಹಿಕ ಶಾಂತಿ-ಸಂಯಮಕ್ಕೆ ಯೋಗ ಅಗತ್ಯ-ಸಂತೋಷ ಬಂಡೆ

ಇಂಡಿ:ಯೋಗವನ್ನು ಅಭ್ಯಾಸ ಮಾಡುವ ಕಲೆಯು ವ್ಯಕ್ತಿಯ ಮನಸ್ಸು,ದೇಹ ಮತ್ತು ಆತ್ಮವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಇದು ಶಾಂತಿಯುತ ದೇಹ ಮತ್ತು ಮನಸ್ಸನ್ನು ಸಾಧಿಸಲು ದೈಹಿಕ ಮತ್ತು ಮಾನಸಿಕ ಶಿಸ್ತುಗಳನ್ನು ಒಟ್ಟುಗೂಡಿಸುತ್ತದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್,ಕೆಜಿಎಸ್,ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಯೋಗ ದಿನದ ನಿಮಿತ್ತ ‘ಮನುಕುಲಕ್ಕಾಗಿ ಯೋಗ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಯೋಗಶಾಸ್ತ್ರದ ನಿರಂತರವಾದ ಅನುಷ್ಠಾನದಿಂದ ಮಕ್ಕಳಲ್ಲಿ ಉತ್ಸಾಹ,ಸಾಹಸ,ಧೈರ್ಯ,ಬುದ್ಧಿಶಕ್ತಿ, ಪರಾಕ್ರಮಗಳು ವರ್ಧಿಸಿ,ಮಾನವೀಯತೆಯನ್ನು ಉತ್ತೇಜಿಸುತ್ತದೆ.ಆಧ್ಯಾತ್ಮಿಕ,ಮಾನಸಿಕ ಮತ್ತು ದೈಹಿಕ ಶಾಂತಿ-ಸಂಯಮಗಳನ್ನು ಕಾಯ್ದುಕೊಳ್ಳಲು ಸಾಧಿಸಲಾಗುವ ಉನ್ನತ ಜೀವನ ಶಿಕ್ಷಣವೇ ಯೋಗವಾಗಿದೆ ಎಂದು ಹೇಳಿದರು ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ,
ಯೋಗದಿಂದ ಸಮಗ್ರ ವ್ಯಕ್ತಿತ್ವದ ಅಭಿವೃದ್ಧಿ ಸಾಧ್ಯ ಇದು ಭಾವನೆಗಳನ್ನು ಸಮತೋಲನಗೊಳಿಸುವ ಮತ್ತು ಮನಸ್ಸು ಮತ್ತು ದೇಹದ ನಡುವೆ ಸಾಮರಸ್ಯವನ್ನು ಸ್ಥಾಪಿಸುವ ಪರಿಪೂರ್ಣ ಮಾರ್ಗವಾಗಿದೆ ಎಂದು ಹೇಳಿದರು. 
ಕೆಜಿಎಸ್ ಮುಖ್ಯ ಶಿಕ್ಷಕ ಸುರೇಶ ಅಂಕಲಗಿ,ಯುಬಿಎಸ್ ಮುಖ್ಯ ಶಿಕ್ಷಕ ಎ ಎಂ ಬೆದ್ರೇಕರ,ಶಿಕ್ಷಕರಾದ ಎಸ್ ಎಂ ಪಂಚಮುಖಿ,ಎಸ್ ಆರ್ ಚಾಳೇಕಾರ,ಎಸ್ ಎಸ್ ಅರಬ,ಎಸ್ ಎಂ ಮಕಾನದಾರ, ಸುರೇಶ ದೊಡ್ಯಾಳಕರ,ಎಸ್ ಡಿ ಬಿರಾದಾರ, ವಿ ವೈ ಪತ್ತಾರ,ಜೆ ಎಂ ಪತಂಗಿ,ಎಸ್ ಬಿ ಕುಲಕರ್ಣಿ,ಸಾವಿತ್ರಿ ಸಂಗಮದ,ಎಸ್ ಎನ್ ಡಂಗಿ,ಜೆ ಸಿ ಗುಣಕಿ,ಎಸ್ ಎಚ್ ಮೈದರಗಿ, ಎನ್ ಬಿ ಚೌಧರಿ,ಎಸ್ ಪಿ ಪೂಜಾರಿ,ಎಂ ಎಂ ಪತ್ತಾರ,ಯಲ್ಲಮ್ಮ ಸಾಲೋಟಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ:ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ