ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿ ಎಂ ಎಸ್ ಶಾಲೆಯಲ್ಲಿ ಯೋಗ ದಿನಾಚರಣೆ

ನಿಡಗುಂದಿ : ಪಟ್ಟಣದ ಬಿ ಎಂ ಎಸ್ ಶಾಲೆಯ ಆವರಣದಲ್ಲಿ ಶಾಲಾ ಸಂಸ್ಥೆಯ ಸಂಸ್ಥಾಪಕರಾದ ಶರಣಪ್ಪ ನಾಗರಬೆಟ್ಟ ಅವರ ಅಧ್ಯಕ್ಷತೆಯಲ್ಲಿ ಅಂತರಾಷ್ಟ್ರೀಯ ಯೋಗದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಉಪನ್ಯಾಸಕರಾದ ನಜೀರ ದಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ ಯೋಗ ದಿನಾಚರಣೆಯನ್ನು ಇಂದು ವಿಶ್ವಾದ್ಯಂತ ಆಚರಿಸಲಾಗುತ್ತಿದೆ, ಯೋಗಾಭ್ಯಾಸದಿಂದ ನಾವು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದಾಗಿದೆ. ಪ್ರತಿನಿತ್ಯ ಯೋಗಾಸನ ಮಾಡುವುದನ್ನು ಎಲ್ಲರೂ ರೂಢಿಸಿಕೊಳ್ಳಬೇಕು ಎಂದರು.
ಈ ವೇಳೆ ಹಿರಿಯರಾದ ವಿಜಯಲಕ್ಷ್ಮಿ ನಾಗರಬೆಟ್ಟ, ಸಂಸ್ಥೆಯ ನಿರ್ದೇಶಕರಾದ ಸೋಮಶೇಖರ ನಾಗರಬೆಟ್ಟ, ಪ್ರಾಥಮಿಕ ವಿಭಾಗದ ಮುಖ್ಯ ಗುರುಮಾತೆ ಸೀಮಾ ನಾಗರಬೆಟ್ಟ, ಉಪನ್ಯಾಸಕರಾದ ಶಿಲ್ಪಾ ಶಾ , ಯಾಸೀನ್ ಮುಲ್ಲಾ ಸೇರಿದಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲಾ ಶಿಕ್ಷಕರು, ಶಿಕ್ಷಕಿಯರು, ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಾಲೆಯ ದೈಹಿಕ ಶಿಕ್ಷಕರಾದ ಅಶೋಕ ಚಲವಾದಿ ಎಲ್ಲಾ ಮಕ್ಕಳಿಗೂ ಯೋಗಾಭ್ಯಾಸ ಮಾಡಿಸುವ ಮೂಲಕ ಯೋಗ ಪ್ರಜ್ಞೆ ಮೂಡಿಸಿದರು. ಸಂಗೀತ ಶಿಕ್ಷಕರಾದ ಮಲ್ಲು ಗದ್ದಿ ಕಾರ್ಯಕ್ರಮ ನಿರ್ವಹಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ