ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಾನಪದ ಕಲೆ ಮತ್ತು ಸಾಂಸ್ಕೃತಿಕ ಜಿಲ್ಲೆ ನಮ್ಮದು:ಶಾಸಕ ಎಮ್ ಆರ್ ಮಂಜುನಾಥ್

ಹನೂರು :ಗಡಿ ಜಿಲ್ಲೆಯ ಮಾದಪ್ಪನ ಸನ್ನಿಧಿಯಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವವ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು (ರಿ.)ಮೈಸೂರು,
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರ ಸಹಯೋಗದಿoದ ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿನಲ್ಲಿ ಈ ಸಂಭ್ರಮವನ್ನು ಮಾಡುತ್ತಿರುವುದು ನಮ್ಮೆಲ್ಲರಿಗೂ ಸಂತೋಷದ ವಿಷಯ ಹಾಗೂ ಇದೇ ರೀತಿಯಲ್ಲಿ ಸರ್ಕಾರದ ವತಿಯಿಂದ ಇಂತಹ ಎಲ್ಲಾ ಕಾರ್ಯಕ್ರಮಗಳಿಗೆ ಸಂಪೂರ್ಣ ಬೆಂಬಲವಿದೆ ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು .
ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಗಡಿನಾಡು ಸಾoಸ್ಕೃತಿಯ ಉತ್ಸವ ಸಮಾರಂಭ ಉದ್ಘಾಟನೆ ಮಾಡಲಾಯಿತು ಈ ಕಾರ್ಯಕ್ರಮ ಆರಂಭಕ್ಕೂ ಮೊದಲು ವಿವಿಧ ಕಲಾ ತಂಡಗಳಿಂದ ಮಂಗಳವಾದ್ಯ. ವಿರಾಗಸೆ.ಕಂಸಾಳೆ,ಡೊಳ್ಳು ಕುಣಿತ,ಗೊರವರ ಕುಣಿತ,ಬಿಲ್ಲು ಕುಣಿತ,ಬೇಡಗಂಪಣರ ನೃತ್ಯ ಮುಂತಾದ ಕಲಾ ಉತ್ಸವಕ್ಕೆ ಅಪರ ಜಿಲ್ಲಾಧಿಕಾರಿ,ಮಹದೇಶ್ವರ ಬೆಟ್ಟ ಪ್ರಾಧಿಕಾರ ಕಾರ್ಯದರ್ಶಿ ಕ್ಯಾತ್ಯಾಯಿನಿ ದೇವಿರವರು ಉದ್ಘಾಟನೆ ಮಾಡಿದರು.
ನಂತರ ವೇದಿಕೆಯಲ್ಲಿ ಮಾತನಾಡಿದ ಸುತ್ತೂರು ಮಹಾಸಂಸ್ಥಾನ ಮಠದ ಶಿವರಾತ್ರಿ ದೇಸಿಕೇಂದ್ರದ ಮಹಾಸ್ವಾಮಿಗಳು ದೇಶ ಏಕತೆಯಿಂದ ಬೆಳೆಯಬೇಕು ನಾವೆಲ್ಲರೂ ಒಂದೇ ಕಲೆಗೆ ಭಾಷೆಯ ಯಾವುದೆ ಜಾತಿ ಜನಾಂಗದ ಬಣ್ಣವಿಲ್ಲ ನಾವೆಲ್ಲರೂ ಮಾನವರು ಎಂಬ ವಾಕ್ಯವನ್ನು ಸದಾ ಮನಸಿನಲ್ಲಿಟ್ಟುಕೊಂಡು ಜೀವಿಸಬೇಕು. ಇವತ್ತಿನ ಕಾರ್ಯಕ್ರಮ ಗಡಿನಾಡು ಗಡಿ ತಾಲೂಕಿನಲ್ಲಿ ಆಯೋಜನೆ ಮಾಡಿದ್ದೂ ತುಂಬಾ ಒಳ್ಳೆಯ ಸಂಗತಿ ಕಲೆ ಸಂಸ್ಕೃತಿ ಅನ್ನೋದು ಮನುಷ್ಯನ ಭವ್ಯವಾದ ಒಂದು ಅಂಗವಾಗಿದೆ ಅದರದೇ ಆದ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯುತ್ತದೆ. ಇವತ್ತಿನ ದಿನಗಳಲ್ಲಿ ಜಾನಪದ ಕಲೆ ಸಾಹಿತ್ಯವನ್ನು ಮನುಷ್ಯ ಮರೆಯುತ್ತಿದ್ದಾನೆ ಆದ್ದರಿಂದ ಕಲೆ ಸಂಸ್ಕೃತಿ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಎಂದು ಹೇಳಿದರು. ಮಳವಳ್ಳಿ ಮಹದೇವಸ್ವಾಮಿ ರವರು ರಾಜ್ಯಾದಂತ್ಯ ತಮ್ಮ ಜಾನಪದ ಕಲೆಯಿಂದ ಹೆಸರುವಾಸಿಯಾಗಿದ್ದಾರೆ ಕಳೆದ ಒಂದು ವಾರದಿಂದ ಅವರು ಹಾಡಿರುವ ಅನ್ಯಾಯಕಾರಿ ಬ್ರಹ್ಮ ಈ ಸುಂದರನ ಸನ್ಯಾಸಿ ಮಾಡಬಹುದೇ ಎಂಬ ಹಾಡೊಂದು ರಾಜ್ಯದಿಂದ ದಾಟಿ ದೇಶದಿಂದಾಚೆಗೆ ತಲುಪಿದೆ ಆಗಾಗಿ ಜಾನಪದ ಸಾಹಿತ್ಯ ಕಲೆಗೆ ಹೆಚ್ಚಿನ ಆದ್ಯತೆ ಕೊಡಬೇಕು ಎಂದರು.
ಹಾಗೂ ಕ್ಷೆತ್ರದ ಶಾಸಕ ಮಂಜುನಾಥ್ ತಾಲೂಕಿನಲ್ಲಿ ಗ್ರಾಮೀಣ ಭಾಗದಲ್ಲಿನ ಬಡತನ ಮತ್ತು ಸೌಲಭ್ಯ ವಂಚಿತ ಗ್ರಾಮಗಳಿಗೆ ಮೂಲಭೂತ ಸೌಕರ್ಯ ನೀಡುವ ನಿಟ್ಟಿನಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡುವ ಕನಸೊತ್ತಿದ್ದಾರೆ ಈ ಕುರಿತು ವೇದಿಕೆಯಲ್ಲಿ ನನ್ನ ಜೊತೆ ಚರ್ಚೆ ಮಾಡಿದ್ದಾರೆ ಕ್ಷೇತ್ರಕ್ಕೆ ಸಾಮಾಜಿಕ ಕಳಕಳಿಯುಳ್ಳ ಶಾಸಕ ಸಿಕ್ಕಿದ್ದಾರೆ ಎಂದು ಹೇಳಿದರು ಸಮಾರಂಭ ಉದ್ಘಾಟನೆ ಮಾಡಿ ಮಾತನಾಡಿದ ಕ್ಷೇತ್ರದ ಶಾಸಕ ಮಂಜುನಾಥ್ ಶಾಸಕನಾಗಿ ಮೊದಲ ಬಾರಿಗೆ ಇಂತಹ ಐತಿಹಾಸಿಕ ಸರ್ಕಾರಿ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡುತ್ತಿರುವುದು ತುಂಬಾ ಸಂತೋಷ ಸಾಂಸ್ಕೃತಿಕ ಮತ್ತು ಜಾನಪದ ಕಲೆಗೆ ಚಾಮರಾಜನಗರ ಜಿಲ್ಲೆ ಹೆಸರುವಾಸಿಯಾಗಿದೆ ನಾಡು ನುಡಿ ಸಂಸ್ಕೃತಿಯನ್ನು ಬೆಳೆಸಿ ಅದಕ್ಕೆ ಪ್ರಾತ್ಯನಿಧ್ಯ ಕೊಟ್ಟು ಜಾನಪದ ಮತ್ತು ಕಲೆ ಸಂಸ್ಕೃತಿಯನ್ನು ಇನ್ನೂ ಹೆಚ್ಚಾಗಿ ಉಳಿಸಿ ಬೆಳೆಸಬೇಕು ಎಂದರು ಇದೇ ಸಂದರ್ಭದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷರು ಡಾ.ಸಿ. ಸೋಮಶೇಖರ್,ಮಲೆ ಮಹದೇಶ್ವರ ಬೆಟ್ಟದ ಕಾರ್ಯದರ್ಶಿ ಎಸ್.ಕಾತ್ಯಾಯಿನಿದೇವಿ, ಮಲೆಮಹದೇಶ್ವಬೆಟ್ಟ ಗ್ರಾ.ಪಂ.ಅಧ್ಯಕ್ಷ ಎಂ. ಕುಮಾರ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಎನ್. ಗುರುಲಿಂಗಯ್ಯ,ಸಾಹಿತ್ಯ ಪರಿಷತ್ ಉಪಾಧ್ಯಕ್ಷ ಕೆ.ಬಿ.ಷಣ್ಮುಖಪ್ಪ,ಜಿಲಾಧ್ಯಕ್ಷ ವಿ. ಮಲ್ಲಿಕಾರ್ಜುನ ಸ್ವಾಮಿ ದುಗ್ಗಹಟ್ಟಿ,ತಾಲೋಕ್ ಅಧ್ಯಕ್ಷರು ಸು. ಬಸವರಾಜದೊಡ್ಡಟ್ಟಿ ಹಾಗೂ ಪರಿಷತ್ ಪದಾಧಿಕಾರಿಗಳು ಹಾಗೂ ಇನ್ನಿತರರು ಹಾಜರಿದ್ದರು .

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ