ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿಸಿದ ಕಿಲ್ಲನಕೇರಾ ಗ್ರಾಮದ ಮಕ್ಕಳು

ಯಾದಗಿರಿ ತಾಲೂಕು:
ಸಕಾಲಕ್ಕೆ ಮಳೆ ಬಾರದೇ ಇರುವುದರಿಂದ ರೈತರು ಕೈಂಗಾಲಾಗಿದ್ದು, ಯಾದಗಿರಿ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಮಳೆಗಾಗಿ ಮಕ್ಕಳಿಂದ ಕಪ್ಪೆಗಳ ಮದುವೆ ಮಾಡಿಸಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಮಕ್ಕಳು ಭುಜದ ಮೇಲೆ ಒಣಕ್ಕೆ ಒಂದಕ್ಕೆ ಜೋಡಿ ಕಪ್ಪೆಗಳನ್ನು ಕಟ್ಟಿಕೊಂಡು ಓಣಿಯಲ್ಲಿನ ಮನೆ ಮನೆಗೆ ತೆರಳಿ ಮೈಮೇಲೆ ನೀರು ಹಾಕಿಸಿಕೊಂಡು ಕುಣಿದು ಸಂಭ್ರಮಿಸಿದ್ದಾರೆ.

ಜೋಡಿ ಕಪ್ಪೆಗಳಿಗೆ ಮದುವೆ ಮಾಡಿದ ಬಳಿಕ ಒಣಕೆಗೆ ಬೇವಿನ ತಪ್ಪಲು ಕಟ್ಟಿ “ಉಯ್ಯೋ ಉಯ್ಯೋ ಮಳೆರಾಯ ದೋಣಿ ನೀರು ತಾರಯ್ಯ”, ಬಣ್ಣ ಕೊಡ್ತೀನಿ ಬಾ ಮಳೆರಾಯ, ಸುಣ್ಣ ಕೊಡ್ತೀನಿ ಮಳೆ ಸುರಿಯೋ ಮಳೆರಾಯ ಎಂದು ಬೇಡಿಕೊಂಡರು.

ಮುಂಗಾರು ಮಳೆ ಮುನಿಸಿಕೊಂಡ ಹಿನ್ನಲೆ ಮಳೆ ಬರುವಂತೆ ಈ ರೀತಿ ವಿಶಿಷ್ಟವಾಗಿ ಪ್ರಾರ್ಥಿಸುತ್ತಿದ್ದಾರೆ. ಸಕಾಲಕ್ಕೆ ಮಳೆಯಾಗದೇ ರೈತರು ನಿರೀಕ್ಷೆಯಂತೆ ಫಲ ಪಡೆಯದೇ ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿದ್ದರಿಂದ ರೈತರು ಆಕಾಶಕ್ಕೆ ಮುಖ ಮಾಡಿ ಕುಳಿತಿದ್ದಾರೆ.
ಈ ಸಂದರ್ಭದಲ್ಲಿ ಮಕ್ಕಳಿಗೆ ಸಹಕಾರಿಯಾಗಿ ಗ್ರಾಮಸ್ಥರಾದ ಬಸಲಿಂಗಪ್ಪ ಹೊನ್ನಪ್ಪನ್ನೋರ್, ದೊಡ್ಡ ಚಿದಾನಂದ, ಶರಣಪ್ಪ ಆಶಪ್ಪನ್ನೋರ್,ಹಣಮಂತ ಹೊನ್ನಪ್ಪನ್ನೋರ್,ನಿಂಗಪ್ಪ,ಗುಂಜಲಪ್ಪ, ಹಾಗೂ ಮಕ್ಕಳಾದ ವಿನೋದ್, ಬಸವರಾಜ,ಅರುಣಕುಮಾರ,ಮಹೇಶ, ಧರ್ಮರಾಜ,ಗಜೇಂದ್ರ,ಆಂಜನೇಯ ಇನ್ನಿತರು ಇದ್ದರು.
ವರದಿ:ಶಿವರಾಜ ಸಾಹುಕಾರ ವಡಗೇರಾ
ಜಿಲ್ಲಾ ವರದಿಗಾರರು ಯಾದಗಿರಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ