ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅವ್ಯವಸ್ಥೆಗಳ ಆಗರ ಈ ವಸತಿ ಶಾಲೆ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು
ಕುಪ್ಪಗಡ್ಡೆ(ಆನವಟ್ಟಿ)ಯ
ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ
ಅವ್ಯವಸ್ಥೆಗಳ ಆಗರವಾಗಿದೆ.
ಇಲ್ಲಿನ ಸಿಬ್ಬಂದಿ ಸರಿಯಾಗಿ ಕಾರ್ಯನಿರ್ವಹಿಸದೆ ವ್ಯವಸ್ಥೆ ಹದಗೆಟ್ಟಿದೆ. ಇಲ್ಲಿ ಎಲ್ಲಾ ರೀತಿಯ ಸಿಬ್ಬಂದಿ ಇದ್ದರೂ ಮಕ್ಕಳು ಜೀತದಾಳಿನಂತೆ ದುಡಿಯುತ್ತಿದ್ದು ಮಕ್ಕಳಿಗೆ ಸರಿಯಾದ ಊಟ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳ ಸಿಗದೇ ಪರದಾಡುವoತಾಗಿದೆ ಮಕ್ಕಳ ಎದುರಲ್ಲೇ ಸಿಬ್ಬಂದಿಗಳು ಅನೈತಿಕವಾಗಿ ವರ್ತಿಸುವುದು,ಮಕ್ಕಳಿಂದ ಅಡುಗೆ ಕೆಲಸಗಳನ್ನು ಮಾಡಿಸುವುದು ನೆಲ ಮತ್ತು ಟಾಯ್ಲೆಟ್,ಸ್ನಾನಗೃಹಗಳ ಸ್ವಚ್ಛತೆಯನ್ನು ಕೂಡಾ ವಿದ್ಯಾರ್ಥಿಗಳ ಕಡೆಯಿಂದ ಮಾಡಿಸುತ್ತಿದ್ದಾರೆ ಇದನ್ನು ಮಕ್ಕಳು ಪ್ರಾಂಶುಪಾಲರ ಗಮನಕ್ಕೆ ಕೂಡಾ ತಂದಿದ್ದರೂ ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳದೆ ದಿನದೂಡುತ್ತಿದ್ದಾರೆ ಈ ಎಲ್ಲಾ ಅನೈತಿಕ ಚಟುವಟಿಕೆಗಳ ಮೂಲ ರೂವಾರಿ ಪ್ರಾಂಶುಪಾಲರಾಗಿದ್ದು,ಇಲ್ಲಿ ಕೆಲಸ ಮಾಡುತ್ತಿರುವ ಹಲವು ಸಿಬ್ಬಂದಿಗಳು ಪ್ರಾಂಶುಪಾಲರ ಸಂಬಂಧಿ ಮತ್ತು ಸ್ನೇಹಿತರಾಗಿರುತ್ತಾರೆ ಮತ್ತು ಶಾಲೆಯಲ್ಲಿ ಸಿಸಿಟಿವಿ ಬಳಕೆ ಮಾಡದೆ ಇರುವುದು ಕಂಡುಬಂದಿದ್ದು ಇಲ್ಲಿ ಹೆಣ್ಣು ಮಕ್ಕಳಿಗೆ ಭದ್ರತೆ ಇಲ್ಲದೇ ಇರುವುದರಿಂದ ಈ ಕೂಡಲೇ ಮೇಲಾಧಿಕಾರಿಗಳು ಇದರ ಬಗ್ಗೆ ವಿಚಾರಣೆ ನಡೆಸಿ ಮಕ್ಕಳಿಗೆ ರಕ್ಷಣೆ ನೀಡಿ ಅಪರಾಧಿಗಳ ಮೇಲೆ ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಳುತ್ತೇವೆ ಎಂದು ಪೋಷಕರೊಬ್ಬರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ