ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿವಿಧ ಬೇಡಿಕೆ ಈಡೇರಿಸುವಂತೆ ಡಿವಿಪಿಯಿಂದ ಸಚಿವರಿಗೆ ಮನವಿ

ಬೆಂಗಳೂರು:ವಸತಿ ನಿಲಯಗಳ ಸಮಸ್ಯೆ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸತತ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಲಾಪ್ ಟಾಪ್ ವಿತರಣೆಯ ಕಾರ್ಯವನ್ನು ಪುನಃ ಆರಂಭಿಸಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಧಾರವಾಡ ಜಿಲ್ಲಾ ಘಟಕವು ಇಂದು ಬೆಂಗಳೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಡಾ.ಎಚ್.ಸಿ.ಮಹಾದೇವಪ್ಪ ಅವರಿಗೆ ಮನವಿ ನೀಡಲಾಯಿತು.ಧಾರವಾಡ ಜಿಲ್ಲಾ ಘಟಕವು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಡಾ.ಎಚ್.ಸಿ.ಮಹಾದೇವಪ್ಪ ಅವರ ಬೆಂಗಳೂರಿನಲ್ಲಿರುವ ನಿವಾಸಕ್ಕೆ ತೆರಳಿ ಪ್ರತಿ ಶಿಕ್ಷಣ ಕೇಂದ್ರದಲ್ಲಿ ಪ್ರವೇಶ ಪಡೆದ ಪ್ರತೀ ವಿದ್ಯಾರ್ಥಿಗೂ ಶಿಷ್ಯವೇತನ ನೀಡಬೇಕು,
ವಸತಿ ನಿಲಯಗಳಲ್ಲಿ ಪ್ರವೇಶ ಪಡೆಯುವ ಪ್ರತೀ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಬೇಕು ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಪ. ಜಾತಿ / ಪ. ಪಂಗಡದ ವಿದ್ಯಾರ್ಥಿಗಳಿಗೆ ಸತತವಾಗಿ ನಾಲ್ಕು ವರ್ಷಗಳಿಂದ ನಿಲ್ಲಿಸಲಾಗಿದ್ದ ಲ್ಯಾಪ್ ಟಾಪ್ ವಿತರಣೆಯ ಕಾರ್ಯವನ್ನು ಪುನಃ ಪ್ರಾರಂಭಿಸಿ ವಂಚಿತಗೊಂಡ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಸೌಲಭ್ಯ ಕಲ್ಪಿಸಿಕೊಡಬೇಕು, ಪ್ರತೀ ವಸತಿ ನಿಲಯಗಳಲ್ಲಿ ಶೈಕ್ಷಣಿಕ ಪೂರಕ ಕೇಂದ್ರವಾಗಿ ನಿರ್ಮಾಣ ಮಾಡಬೇಕು, ಪ್ರತೀ ವಸತಿ ನಿಲಯಗಲ್ಲಿ ಸ್ಪೋಕನ್ ಇಂಗ್ಲಿಷ್ ತರಬೇತಿ ಹಾಗೂ ಬೇಸಿಕ್ ಕಂಪ್ಯೂಟರ್ ಕೋರ್ಸ್ ಮೂಲಕ ತರಬೇತಿ ನೀಡಬೇಕು, ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಪಾಲಕರು ಹಾಗೂ ಇಲಾಖೆಯ ಅಧಿಕಾರಿಗಳು ಒಳಗೊಂಡಂತೆ ವಸತಿ ನಿಲಯ ಮೇಲುಸ್ತುವಾರಿ ಸಮಿತಿ ರಚಿಸಿ ವಸತಿ ನಿಲಯಗಳಲ್ಲಿ ಶಿಸ್ತು ಕಾಪಾಡಬೇಕು, ವಸತಿ ನಿಲಯ ಮೇಲುಸ್ತುವಾರಿ ಸಮಿತಿ ಸಭೆ ಕಡ್ಡಾಯವಾಗಿ ಪ್ರತೀ ತಿಂಗಳು ನಡೆಯುವಂತೆ ನೋಡಿಕೊಳ್ಳಬೇಕು, ವಸತಿ ನಿಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಗ್ರಂಥಾಲಯ ತೆರೆಯಬೇಕು, ವಸತಿ ನಿಲಯಗಳಲ್ಲಿ ಸರಿಯಾದ ಸಮಯಕ್ಕೆ ಸಾಬೂನು ಕಿಟ್ ಗಳು ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ಪ್ರತೀ ತಿಂಗಳು ತಪ್ಪದೇ ಸ್ಯಾನಿಟೈಜರ್ ಕಿಟ್ ಗಳು ದೊರೆಯಬೇಕು, ವಸತಿ ನಿಲಯಗಳಲ್ಲಿ ನೀರಿನ ಸೌಲಭ್ಯಕ್ಕೆ ಕೊರತೆಯಾಗಿದ್ದು ಪ್ರತ್ಯೇಕ ಕುಡಿಯುವ ನೀರಿನ ಶುದ್ಧಿಕರಣ ಘಟಕವನ್ನು ಅಳವಡಿಸುವುದರ ಜೊತೆಗೆ ಗುಣಮಟ್ಟದ ಆಹಾರವನ್ನು ನೀಡಬೇಕು, ವಸತಿ ನಿಲಯಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕಾರ್ಯಗಾರ ನಡೆಸಬೇಕು, ವಸತಿ ನಿಲಯಗಳಲ್ಲಿ ಪ್ರತೀ ಊಟ ಉಪಹಾರದ ಮುಂಚೆ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ಪೂರ್ವ ಪೀಠಿಕೆಯನ್ನು ಓದಬೇಕು, ವಿದ್ಯಾರ್ಥಿನಿಯರ ವಸತಿ ನಿಲಯಗಳಿಗೆ ಭದ್ರಾತಾ ವ್ಯವಸ್ಥೆ ಅಥವಾ ಮಹಿಳಾ ಹೋಮ್ ಗಾರ್ಡ್ ಗಳನ್ನು ನೇಮಿಸಬೇಕು, ವಸತಿ ನಿಲಯಗಳಲ್ಲಿ ವಾಸಿಸುವ ವಿದ್ಯಾರ್ಥಿಗಳು ಅನಾರೋಗ್ಯದಿಂದ ಬಳಲುತ್ತಿದ್ದಾಗ ಅವರಿಗೆ ಉಚಿತವಾಗಿ ತಕ್ಷಣವೇ ಚಿಕಿತ್ಸೆ ದೊರೆಯುವಂತೆ ವೈದ್ಯರನ್ನು ನೇಮಿಸಬೇಕು, ಪ್ರತೀ ಪದವಿ ಮತ್ತು ಸ್ನಾತಕೋತ್ತರ ವಸತಿ ನಿಲಯಗಲ್ಲಿ ಪ್ರತೀ ತಿಂಗಳು ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿಗಳನ್ನು ಹಾಗೂ ಟಿಇಟಿ, ಸಿಇಟಿ, ಜಿಪಿಎಸ್ಟಿ ಆರ್, ಎಚ್ ಎಸ್ ಟಿ ಆರ್,ನೆಟ್ ಮತ್ತು ಕೆಸೆಟ್ ನಂತಹ ಪುಸ್ತಕಗಳನ್ನು ವಸತಿ ನಿಲಯದ ಗ್ರಂಥಾಲಯಗಲ್ಲಿ ದೊರೆಯುವಂತಾಗಬೇಕು, ವಿವಿಧ ಪದವಿ, ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಬೇಗನೇ ಮಂಜೂರಾಗಬೇಕು, ವಿಶ್ವವಿದ್ಯಾಲಯಕ್ಕೆ ಒಳಪಡುವ ಎಲ್ಲಾ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಮಾಸಿಕ ಶಿಷ್ಯವೇತನವನ್ನು ಇಂದಿನ ಮಾರುಕಟ್ಟೆಯ ದರವನ್ನು ಗಮನದಲ್ಲಿಟ್ಟುಕೊಂಡು 5000ಕ್ಕೆ ಹೆಚ್ಚಿಸಬೇಕು, ಕಾನೂನು ವಿದ್ಯಾರ್ಥಿಗಳಿಗೆ ಸ್ಥಗಿತಗೊಂಡಿದ್ದ ಮಾಸಿಕ ಶಿಷ್ಯವೇತನವನ್ನು ಪುನಃ ಪ್ರಾರಂಭಿಸಿ ಮಾರುಕಟ್ಟೆಯ ಆಧಾರದ ಮೇಲೆ ನಿಗದಿಸಬೇಕು, ಸ್ನಾತಕೋತ್ತರ ವಿದ್ಯಾರ್ಥಿಗಳು ಮಾಡುವ ಕ್ಷೇತ್ರಕಾರ್ಯ ಅಧ್ಯಯನ ವರದಿಗಾಗಿ ರೂ.10,000 ವರೆಗೆ ದೊರೆಯುವಂತಾಗಬೇಕು, ವಿಶ್ವವಿದ್ಯಾಲಯದಲ್ಲಿ ಅಭ್ಯಾಸಿಸುತ್ತಿರುವ ಪ. ಜಾತಿ /ಪ. ಪಂಗಡದ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ, ಡಿಪ್ಲೋಮ ಹಾಗೂ ವಸತಿ ನಿಲಯದ ಪ್ರವೇಶ ಶುಲ್ಕಗಳನ್ನು ಹೆಚ್ಚಿಸಿದ್ದು ಅದನ್ನು ಕಡಿತಗೊಳಿಸಬೇಕು, ಮ್ಯಾನೇಜ್ಮೆಂಟ್ ಕೋಟಾದಡಿಯಲ್ಲಿ ಪ್ರವೇಶ ಪಡೆದ ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಹಾಗೂ ಶಿಷ್ಯವೇತನ ಮಂಜೂರು ಮಾಡಬೇಕು ಹೀಗೆ ಪ. ಜಾತಿ /ಪ. ಪಂಗಡದ ವಿದ್ಯಾರ್ಥಿಗಳ 19 ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ ನೀಡಿದರು.
ಈ ವೇಳೆ ಜಿಲ್ಲಾ ಅಧ್ಯಕ್ಷರಾದ ಹನುಮಂತ ದಾಸರ, ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಹಾಸಟ್ಟಿ, ಸಂಗಮೇಶ ಬನಸೋಡೆ,ಕುಮಾರ್ ತಳವಾರ ಹಾಗೂ ಬಸವರಾಜ್.ಎಚ್.ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ