ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೊಟ್ಟೂರು ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮಾಡಲು ಒತ್ತಾಯ


ಕೊಟ್ಟೂರು:
ಈ ಹಿಂದೆ ಪುರಸಭೆಯಾಗಿ,ವಿಧಾನಸಭಾ ಕ್ಷೇತ್ರವಾಗಿಯೂ ಇತ್ತು ಆದರೆ ನಂತರದ ದಿನಗಳಲ್ಲಿ ಪುರಸಭೆ ಸ್ಥಾನ,ವಿಧಾನಸಭಾ ಕ್ಷೇತ್ರ ಎರಡೂ ಕೈತಪ್ಪಿದವು ಪುರಸಭೆಯಿಂದ ಪಟ್ಟಣ ಪಂಚಾಯಿತಿಗೆ ಹಿಮ್ಮುಖ ಚಲನೆಗೆ ಕೊಟ್ಟೂರು ಒಳಗಾಯಿತು ಪ್ರಸ್ತುತ ವಿಜಯನಗರ ಜಿಲ್ಲೆಯಲ್ಲಿಯೇ ಪರಿಣಾಮಾತ್ಮಕ ರಾಜಸ್ವ ಸಂಗ್ರಹವಾಗುವುದರ ಜೊತೆಗೆ ಐತಿಹಾಸಿಕ ಹಿನ್ನೆಲೆ,ಪೌರಾಣಿಕ ಹಿನ್ನೆಲೆಯಿದ್ದರೂ ಸಹ ಪಟ್ಟಣ ಪಂಚಾಯಿತಿಯಾಗಿಯೇ ಉಳಿದಿದೆ ಪುರಸಭೆಗೆ ಇರುವ ಎಲ್ಲಾ ಅರ್ಹತೆಗಳಾದ ಜನಸಂಖ್ಯೆ ಮೂಲಭೂತ ಸೌಲಭ್ಯ,ಪಟ್ಟಣ ಬೆಳೆಯುತ್ತಿರುವ ವೇಗ ಇವೆಲ್ಲವೂ ಗಣನೀಯವಾಗಿ ಏರುಮುಖವಿದ್ದರೂ ಸಹ ಕೊಟ್ಟೂರನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ಸರ್ಕಾರದ ಇಚ್ಛಾಶಕ್ತಿಯ ಕೊರತೆ ಎದ್ದುಕಾಣುತ್ತಿದೆ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು ಈ ಹಿಂದೆಯೇ ಕೊಟ್ಟೂರನ್ನು ಪುರಸಭೆಯನ್ನಾಗಿ ಮಾಡಲು ಶ್ರಮಿಸಿದರೂ ಅದು ಕೈಗೂಡದೇ ಅರ್ಧಕ್ಕೆ ನಿಂತುಬಿಟ್ಟಿತು.
ಸಾಮಾಜಿಕ ಬದ್ಧತೆಯನ್ನು ಒಳಗೊಂಡಂತೆ ಗ್ಯಾರಂಟಿಗಳನ್ನು ಈಡೇರಿಸುವುದರ ಮೂಲಕ ಜನರ ಭರವಸೆಯನ್ನು ಹೆಚ್ಚಿಸಿರುವ ಸಿದ್ಧರಾಮಯ್ಯನವರ ಕಾಂಗ್ರೆಸ್ ಸರ್ಕಾರ ಜನರ ಆಶೋತ್ತರಗಳಿಗೆ ತಕ್ಕಂತೆ ಕೆಲಸ ಮಾಡುವಂತೆ ಕಾಣಿಸುತ್ತಿರುವ ಪ್ರಯುಕ್ತ ಈ ಭಾಗದ ಜನರ ಆಸೆ ಈಗ ಚಿಗುರೊಡೆದಿದೆ. ವಿಶೇಷವಾಗಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್ ಖಾನ್ ಕೂಡಲೇ ಈ ಬಗ್ಗೆ ಕಾರ್ಯಪ್ರವೃತ್ತರಾಗಿ ಕೊಟ್ಟೂರಿಗೆ ಆಡಳಿತಾತ್ಮಕವಾಗಿ ಸಿಗಬೇಕಾದ ಎಲ್ಲಾ ಸೌಕರ್ಯಗಳನ್ನು ಒದಗಿಸಬೇಕೆಂದು ಕೊಟ್ರೇಶ್,ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಪಿ.ಚಂದ್ರಶೇಖರ್ ಒತ್ತಾಯಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ