ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿ ಎಸ್ ಡಬ್ಲ್ಯೂ ಪದವಿಯಲ್ಲಿ ಪ್ರಥಮ ರಾಂಕ್ ಪಡೆದು ರಾಜ್ಯಪಾಲರಿಂದ ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ತನುಜಾ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ
ಗಂಗೋತ್ರಿ ಬಿ ಎಸ್ ಡಬ್ಲ್ಯೂ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಹರಪನಹಳ್ಳಿ ತಾಲೂಕು ಹಗರಿಗಜಾಪುರ ತನುಜಾ ಶಾನಭೋಗರ ಇವರು ಬಿ ಎಸ್ ಡಬ್ಲ್ಯೂ ಪದವಿಯಲ್ಲಿ ಪ್ರಥಮ ರಾಂಕ್ ಪಡೆದಿರುತ್ತಾರೆ ದಿನಾಂಕ 13.07.2023ರಂದು ನಡೆದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿಯಲ್ಲಿ ನಡೆದ 11 ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ರಾದ ಥಾವರ್ ಚಂದ್ ಗೆಹ್ಲೊಟ್ ರವರಿಂದ ಚಿನ್ನದ ಪದಕ ಪಡೆದುಕೊಂಡಿದ್ದಾರೆ ಎಂದು ಪ್ರಾಚಾರ್ಯರಾದ ಗುರು ಬಸವರಾಜ್ ಎ.ಎಂ.ಎಂ. ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ ಈ ವಿದ್ಯಾರ್ಥಿಯ ಸಾಧನೆಗೆ ಸಹಕರಿಸಿದ ಉಪನ್ಯಾಸಕರು ಹಾಗೂ ಪೋಷಕರಿಗೆ ಕಾಲೇಜಿನ ಆಡಳಿತ ಮಂಡಳಿಯ ಪರವಾಗಿ ಶ್ರೀ ಚಟ್ರಿಕಿ ಬಸವರಾಜ ಅದ್ಯಕ್ಷರು ಗಂಗೋತ್ರಿ ಶಿಕ್ಷಣ ಸಂಸ್ಥೆ ಇವರು ಅಭಿನಂದನೆ ಸಲ್ಲಿಸಿದರು ಗಂಗೋತ್ರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ನಿರ್ಮಲಾ ಶಿವನಗುತ್ತಿ ಹಾಗೂ ಉಪನ್ಯಾಸಕರಿಂದ ವಿದ್ಯಾರ್ಥಿನಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.ವಿದ್ಯೆ ಸಾಧಕರ ಸ್ವತ್ತು ಎಂಬಂತೆ ಅತ್ಯಂತ ಕಡು ಬಡತನದಿಂದ ಅಭ್ಯಾಸ ಮಾಡಿ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದುಕೊಂಡಿರುತ್ತಾರೆ ಪ್ರಯತ್ನ ನಿಮ್ಮದು ಪ್ರೋತ್ಸಾಹ ನಮ್ಮದು ನಿಮ್ಮ ಆಯ್ಕೆ ಗಂಗೋತ್ರಿ ಬಿ ಎಸ್ ಡಬ್ಲ್ಯೂ ಕಾಲೇಜು ಆಗಿರಲಿ ಎಂದು ಸಂಸ್ಥೆಯ ಕಾರ್ಯದರ್ಶಿ ಸಿ.ಬಿ.ರಜತ್ ಆಶಯ ವ್ಯಕ್ತಪಡಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ