ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಾನವನ ದುಷ್ಪರಿಣಾಮಗಳಿಂದ ಪರಿಸರ ಹಾಳಾಗುತ್ತಿದೆ: ಅಮರೇಗೌಡ ಮಲ್ಲಾಪೂರ ಕಳವಳ

ಪರಿಸರ ಪ್ರತಿಯೊಬ್ಬರಿಗೂ ಬೇಕಾದಂತಹ ನೈಸರ್ಗಿಕ ಸಂಪತ್ತು ಅದನ್ನು ನಾವುಗಳೆಲ್ಲರೂ ಉಳಿಸಿ ಬೆಳಸಬೇಕಾಗಿದೆ ಎಂದು ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಅಮರೇಗೌಡ ಮಲ್ಲಾಪೂರ ಅವರು ತಿಳಿಸಿದರು.

ಸಿಂಧನೂರಿನ ಅಮರ ಶ್ರೀ ಆಲದ ಮರದ ಹತ್ತಿರ ವನಸಿರಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ವನಸಿರಿ ಫೌಂಡೇಶನ್ ರಾಜ್ಯ ಉಪಾಧ್ಯಕ್ಷ ಗಿರಿಸ್ವಾಮಿ ಹೆಡಗಿನಾಳ ಅವರ ಹುಟ್ಟು ಹಬ್ಬದ ಅಂಗವಾಗಿ ಸಸಿನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ,ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಅಮರೇಗೌಡ ಮಲ್ಲಾಪೂರ ಅವರು ಪರಿಸರ ಪ್ರತಿಯೊಬ್ಬರಿಗೂ ಬೇಕಾದಂತಹ ನೈಸರ್ಗಿಕ ಸಂಪತ್ತು ಅದನ್ನು ನಾವುಗಳೆಲ್ಲರೂ ಉಳಿಸಿ ಬೆಳಸಬೇಕಾಗಿದೆ.ಮಾನವನ ದುಷ್ಪರಿಣಾಮಗಳಿಂದ ಪರಿಸರ ಹಾಳಾಗುತ್ತಿದೆ.ಅಧುನಿಕತೆಗೆ ಮಾನವ ಮನಸೋತು ಗಿಡಮರಗಳನ್ನು ಕಡಿದು ಹಾಕುತ್ತಿದ್ದಾನೆ.ಮಾನವನ ಹಸ್ತಕ್ಷೇಪದಿಂದ ಪರಿಸರ ಹಾಳಾಗುತ್ತಿದೆ.ಇದರಿಂದಾಗಿ ಗಿಡಮರಗಳ ಸಂಖ್ಯೆ ಇಳಿಕೆಯಾಗುತ್ತಿದೆ.ನೈಸರ್ಗಿಕ ಸಂಪತ್ತು ಕಡಿಮೆಯಾಗಿ ಪರಿಸರ ನಾಶವಾಗುತ್ತಿದೆ.ಪರಿಸರವನ್ನು ಉಳಿಸಿ ಬೆಳಸಬೇಕಾದರೆ ಪ್ರತಿಯೊಬ್ಬರೂ ತಮ್ಮ ಹುಟ್ಟು ಹಬ್ಬದ ಅಂಗವಾಗಿ ಸಸಿಗಳನ್ನು ನೆಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಅಮರೇಗೌಡ ಮಲ್ಲಾಪೂರ,ಅಮರಯ್ಯ ಶಾಸ್ತ್ರೀ ಪತ್ರಿಮಠ,ಶರಣೇಗೌಡ ಹೆಡಗಿನಾಳ,ರಂಜಾನ್ ಸಾಬ್,ವೀರಭದ್ರಯ್ಯಸ್ವಾಮಿ ತಿಮ್ಮಾಪೂರ,ವೆಂಕಟರಡ್ಡಿ ಹೆಡಗಿನಾಳ,ಮುದಿಯಪ್ಪ ಹೊಸಳ್ಳಿ ಕ್ಯಾಂಪ್ ಇನ್ನಿತರರು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ