ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಗುರುವಾರ ಮಧ್ಯರಾತ್ರಿ ಕೃಷ್ಣಾ ನದಿಗೆ ಸುಮಾರು 1.70 ಲಕ್ಷ ಕ್ಯೂಸೆಕ್ಸ್ ನೀರು ಕೃಷ್ಣಾ ನದಿಗೆ ಬಿಡಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ ಶುಕ್ರವಾರ ಬೆಳಿಗ್ಗೆ ಯಾದಗಿರಿ ಜಿಲ್ಲೆ ಶಹಾಪುರ ಮೂಲಕ ಹಾಯ್ದು ಹೋಗುವ,ಕಲಬುರಗಿ-ರಾಯಚೂರು ಜಿಲ್ಲೆಗಳ ಸಂಪರ್ಕಿಸುವ ರಾಜ್ಯ ಹೆದ್ದಾರಿ-15 ರಲ್ಲಿ ಬರುವ, ಶಹಾಪುರ ತಾಲೂಕು ಕೊಳ್ಳೂರು (ಎಂ) ಸೇತುವೆ ಮೇಲೆ ಹರಿದು ಬರುತ್ತಿರುವುದರಿಂದ ಯಾರೂ ನದಿಯ ದಡದಲ್ಲಿ ಬರದಂತೆ ಅಧಿಕಾರಿಗಳು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಬೇಕು ಮೇಲ್ಮಟ್ಟಕ್ಕೆ ನೀರು ಬರಲು 5-6 ಅಡಿಗಳಷ್ಟು ಮಾತ್ರ ಉಳಿದಿದೆ.
ಮಧ್ಯಾಹ್ನದ ವೇಳೆಗೆ ಜಲಾಶಯದಿಂದ ಹೊರಹರಿವು ತಗ್ಗಿದ್ದರಿಂದ,ಸೇತುವೆ ಮೇಲ್ಭಾಗದಲ್ಲಿ ನೀರು ಹರಿಯುವ ಸಾಧ್ಯತೆ ಕಡಮೆಯಾಗಿ,ಸುತ್ತಮುತ್ತಲ ಪ್ರದೇಶದ ಜಮೀನುಗಳು ಈಗಾಗಲೇ ಜಲಾವೃತಗೊಂಡಿವೆ ಯಾದಗಿರಿ ಜಿಲ್ಲೆಯ ಗಡಿಭಾಗದ ಈ ಸೇತುವೆ ದಾಟಿದರೆ,ರಾಯಚೂರು ಜಿಲ್ಲೆಯ ದೇವದುರ್ಗ ಕೇವಲ 10 ಕಿ.ಮೀ. ಅಂತರದಲ್ಲಿದೆ ಸುತ್ತ ಮುತ್ತಲಿನ ಗ್ರಾಮದ ರೈತರು ಸೇತುವೆ ಮುಳುಗುತ್ತದೆ ಎಂದು ಆತಂಕದಲ್ಲಿದ್ದಾರೆ,

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ