ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಣಿಪುರ ಘಟನೆ ಖಂಡಿಸಿ ಅಬ್ದುಲ್ ಕಲಾಂ ಫೌಂಡೇಶನ್ ವತಿಯಿಂದ ಪ್ರತಿಭಟನೆ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

ಚಿಕ್ಕಬಳ್ಳಾಪುರ:ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಹಾಗೂ ಮಹಿಳೆಯರ ಬೆತ್ತಲೆ ಮೆರವಣಿಗೆ ಅತ್ಯಾಚಾರ ಪ್ರಕರಣ ಮನುಕುಲ ಹಾಗೂ ಸಮಾಜ ತಲೆ ತಗ್ಗಿಸುವ ವಿಚಾರ ಇದನ್ನು ಖಂಡಿಸಿ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ ಸಂಸ್ಥೆಯ ವತಿಯಿಂದ ನಗರದ ಹೊರವಲಯದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.‌ಮಹಿಳೆಯರ ಬೆತ್ತಲೆ ಮೆರವಣಿಗೆಯನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದು ಅತ್ಯಂತ ಹೇಯ ಕೃತ್ಯವಾಗಿದೆ ಸಂತ್ರಸ್ತರ ಗುರುತನ್ನು ಬಹಿರಂಗ ಪಡಿಸುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವ ದುಷ್ಕರ್ಮಿಗಳು ಮುಗ್ಧ ಮಹಿಳೆಯರಲ್ಲಿ ಮತ್ತಷ್ಟು ಭಯಾನಕತೆಯನ್ನು ಹುಟ್ಟು ಹಾಕಲು ಹಾಗೂ ಅವರು ಮಾನಸಿಕವಾಗಿ ಕುಗ್ಗಿ ಯಾತನೆ ಅನುಭವಿಸುವಂತೆ ಮಾಡುವ ದುರುದ್ದೇಶ ಹೊಂದಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ ಮಣಿಪುರದಲ್ಲಿ ಎರಡು ತಿಂಗಳ ಕಾಲ ನಡೆದ ಅಶಾಂತಿಯ ಘಟನೆ ಬಗ್ಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟವು ತೀವ್ರ ಕಳವಳ ವ್ಯಕ್ತಪಡಿಸುತ್ತಿವೆ ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಹಿಂಸಾಚಾರ ಪ್ರಕರಣಗಳ ಬಗ್ಗೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಕ್ರಿಯೆ ಕೊಡದೆ ಹಾಗೂ ಯಾವುದೇ ರೀತಿಯ ಕ್ರಮ ಜರುಗಿಸದೆ ಕೈಕಟ್ಟಿ ಕುಳಿತಿರುವುದು ದೇಶದ ಜನರ ತಾಳ್ಮೆ ಕೆಣಕುವಂತಾಗಿದೆ ದೇಶದ ಪ್ರಧಾನ ಸೇವಕ ಎಂದು ಹೇಳಿಕೊಳ್ಳುವ ಪ್ರಧಾನಮಂತ್ರಿ ನರೇಂದ್ರ ಮೋದಿ ಈ ವಿಚಾರದಲ್ಲಿ ಮಾಡಿದ್ದಾದರೂ ಏನು ಎಂದು ಪ್ರಶ್ನೆ ಮಾಡಿರುವ ಅವರು ಮಹಿಳೆಯರ ರಕ್ಷಣೆಗೆ ಮುಂದಾಗಿಲ್ಲ ಎಂದಾದರೆ ಪ್ರಧಾನಿ ಹುದ್ದೆಯಲ್ಲಿ ಅವರು ಇರಲು ಯೋಗ್ಯರಲ್ಲ ಕೂಡಲೇ ಮಣಿಪುರ ವಿಚಾರದಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿ ಮಣಿಪುರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಶೀಘ್ರ ರಾಷ್ಟ್ರಪತಿ ಆಡಳಿತ ಮಣಿಪುರದಲ್ಲಿ ಜಾರಿಯಾಗಿ ಶಾಂತಿಯ ವಾತಾವರಣ ನಿರ್ಮಾಣವಾಗಲಿ ಎಂದು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಡಾ.ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಡಾ.ನಂದಿ ಭಾಷಾ ರಾಜ್ಯ ಕಾರ್ಯದರ್ಶಿ ಹಾಶಿಂ ಬನ್ನೂರು ಜಿಲ್ಲಾಧ್ಯಕ್ಷ ವಿ ರಾಜಶೇಖರ ತಾಲ್ಲೂಕು ಸಮಿತಿ ಕೆ.ಎಂ ಫಜಲುಲ್ಲಾ ಜಯಕುಮಾರ್ ಡಿ.ಎಸ್.ಎಸ್ ರಾಜ್ಯ ಸಂಚಾಲಕರಾದ ಬಿ.ಎನ್.ಗಂಗಾಧರ ಹಾಗೂ ಜಿಲ್ಲಾ ಮತ್ತು ತಾಲೂಕು ನೇತಾರರು ಪಾಲ್ಗೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ