ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸಿ: ಅಸ್ಲಂ ಶೇಖ


ಬಸವನಬಾಗೇವಾಡಿ: ಪಟ್ಟಣದ ಶ್ರೀ ಬಸವೇಶ್ವರ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಕರುನಾಡು ಸಾಹಿತ್ಯ ಪರಿಷತ್ತು ಬಸವನ ಬಾಗೇವಾಡಿ ಘಟಕದ ವತಿಯಿಂದ ಆಯೋಜಿಸಲಾದ ಕವನ ರಚನೆಯ ಕಾರ್ಯಗಾರ ಹಾಗೂ ಕರೋಕೆ ಗಾಯನ ಸ್ಪರ್ಧೆಯ ಕಾರ್ಯಕ್ರಮವನ್ನು ಕರುನಾಡು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಅಸ್ಲಂ ಶೇಖ ನರಸಲಗಿ ತಮ್ಮ ಧರ್ಮ ಪತ್ನಿ ಚಾಂದಬಿ ನದಾಫರೊಂದಿಗೆ ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಲು ಮಾರ್ಗದರ್ಶನ ನೀಡಿದ ಅವರು, ತಾವು ರಚಿಸಿದ ಮಕ್ಕಳ ಕವನವನ್ನು ಓದಿಸಿ ಯಾವ ರೀತಿ ರಚಿಸಬೇಕು , ಪ್ರಾಸ ಪದಗಳನ್ನು ಹೇಗೆ ಜೋಡಿಸಬೇಕು ಎನ್ನುವುದರ ಕುರಿತು ತಿಳಿಸದರಲ್ಲದೆ ಕರೋಕೆ ಸಂಗೀತ ಗಾಯನ ಕುರಿತಾಗಿಯೂ ತಿಳಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವಹಿಸಿದ ನೀಲಪ್ಪ ಅಂಗಡಿ ಅಧ್ಯಕ್ಷೀಯ ಭಾಷಣದಲ್ಲಿ ಮಕ್ಕಳಿಗೆ ಸಾಹಿತ್ಯ ಸಂಗೀತ ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳ ಕುರಿತು ಮಾರ್ಗದರ್ಶನ ನೀಡಿದರು.ಈ ವೇಳೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಂಗಮೇಶ ತಾಳಿಕೋಟಿ ತಮ್ಮ ಕವನ ರಚನೆಯ ಕಲಿಕೆಯ ಅನುಭವವನ್ನು ಹಂಚಿಕೊಂಡರು, ಉಪಸ್ಥಿತಿ ವಹಿಸಿದ್ದ ತಾಲೂಕು ಘಟಕದ ಅಧ್ಯಕ್ಷರಾದ ಶಾಂತಾ ಚೌರಿ ತಮ್ಮ ಸ್ವರಚಿತ ಗೀತೆಯನ್ನು ಹಾಡುವುದರ ಮೂಲಕ ಮಕ್ಕಳಿಗೆ ಕವನ ರಚನೆ ಕುರಿತು ಸಲಹೆ ನೀಡಿದರು.
ಕರೋಕೆ ಗಾಯನ ಸ್ಪರ್ಧೆಯ ನಿರ್ಣಾಯಕರಾಗಿ ಭಾಗವಹಿಸಿದ ಶಿವಾನಂದ ರವರು ಸಂಗೀತ ಹಾಗೂ ಸಾಹಿತ್ಯದ ಕುರಿತು ಮಾತನಾಡಿದರು,
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿ ಮಾಲಾಶ್ರೀ ಮತ್ತು ಪಾಲಕರು ಉಪಸ್ಥಿತರಿದ್ದರು, ಕರುನಾಡು ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾದ ಲಕ್ಷ್ಮೀ ಕಳ್ಳಿಗುಡ್ಡಿ ನಿರೂಪಿಸಿದರು.ಶಿಕ್ಷಕಿ ಕುಸುಮಾ ಅಂಗಡಿ ವಂದಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ