ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉಡುತೊರೆ ಜಲಾಶಯಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ

ಹನೂರು ತಾಲೂಕಿನ ಅರ್ಜಿಪುರ ಸಮೀಪ ಇರುವ ಉಡುತೊರೆ ಜಲಾಶಯಕ್ಕೆ ಶಾಸಕ ಎಂಆರ್ ಮಂಜುನಾಥ್ ಭೇಟಿ ನೀಡಿ ನೀರಾವರಿ ಅಧಿಕಾರಿಗಳ ಜೊತೆ ಮಾತನಾಡಿ ಅಧಿಕಾರಿಗಳು ಮೊದಲು ರೈತರನ್ನು ಕರೆದು ಸಭೆ ನಡೆಸಿ ನೀರಾವರಿ ಸ್ವಹ ಸಮಿತಿ ರಚನೆ ಮಾಡಿ ನಂತರ ನೀರಾವರಿ ಯೋಜನೆಗೆ ಸದ್ಬಳಕೆ ಮಾಡಿಕೊಳ್ಳಲು ನಾಲೆಗಳಲ್ಲಿ ತುಂಬಿರುವ ಉಳು ತೆಗೆಸಿ ಗಿಡ ಗಂಟೆಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸುವಂತೆ ನಂತರ ಜಲಾಶಯದ ಮುಂಭಾಗ ಇರುವ ರೈತರಿಂದ ವಶಪಡಿಸಿಕೊಂಡಿರುವ ಜಮೀನನ್ನು ಸದ್ಬಳಕೆ ಮಾಡಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಅಧಿಕಾರಿಗಳು ಕ್ರಮವಿಸಬೇಕು ನೀರವರಿಗೆ ಸಂಬಂಧಪಟ್ಟಂತ ಕಡತಗಳನ್ನು ಸಂಪೂರ್ಣ ವರದಿಯನ್ನು ನೀಡುವಂತೆ ಅಧಿಕಾರಿಗಳಿಗೆ ತಾಕಿತು ಮಾಡಿದರು
ನೀರಾವರಿ ಯೋಜನೆ ಸಂಪೂರ್ಣ ಸದ್ಬಳಕೆಗೆ ನೀಲ ನಕ್ಷೆ ತಯಾರಿಸಿ : ಜಲಾಶಯದ ನೀರಾವರಿಯನ್ನು ರೈತರಿಗೆ ಸಕಾಲದಲ್ಲಿ ಸಂಗ್ರಹಣೆಯಾಗುವ ನೀರಿನ ಸಾಮರ್ಥ್ಯವನ್ನು ಅರಿತು ನೀರಾವರಿ ಅಧಿಕಾರಿಗಳು ಮುಂದಿನ ದಿನಗಳಲ್ಲಿ ರೈತರನ್ನು ಕರೆದು ಸಭೆ ನಡೆಸಿ ನಂತರ ಜಲಾಶಯದ ಅಚ್ಚುಕಟ್ಟು ಪ್ರದೇಶದ ನೀರಾವರಿ ಯೋಜನೆಯನ್ನು ರೈತರ ಸದ್ಬಳಕೆ ಮಾಡಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಜೆ ಶಿವಮೂರ್ತಿ ಲಿಂಗೇಗೌಡ ಕಾವೇರಿ ನೀರಾವರಿ ನಿಗಮದ ಇಂಜಿನಿಯರ್ ಬಸವೇಶ್ ರೈತರು ಉಪಸ್ಥಿತರಿದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ