ಧಾರವಾಡ:ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಮಣಿಪುರದಲ್ಲಿ ನಡೆದ ಹಿಂಸಾಚಾರ ಪ್ರಕರಣ ಹಾಗೂ ಮಹಿಳೆಯರ ಮೇಲಿನ ಮಣಿಪುರ ರಾಜ್ಯ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಬೇಕು ಎಂದು ಕರವೇ ಸ್ವಾಭಿಮಾನಿ ಸೇನೆ ವತಿಯಿಂದ ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಧಾರವಾಡ ಜಿಲ್ಲಾಧ್ಯಕ್ಷರಾದ ಪಂಡಿತರಾಜ್ ಎನ್ ಇವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯ ಕಾರ್ಯಧ್ಯಕ್ಷರಾದ ರಾಮು ತಳವಾರ,ಧಾರವಾಡ ಜಿಲ್ಲಾ ಮುಖಂಡರಾದ ಸಂಗೊಳ್ಳಿ, ಸೋಮಣ್ಣ,ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧ್ಯಕ್ಷರಾದ ರಾಜು ಯರಗಣಿ,ಧಾರವಾಡ ಜಿಲ್ಲಾ ಸಮಿತಿಯ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ಚಮನಗೌಡ್ರ,ಧಾರವಾಡ ಜಿಲ್ಲಾ ಮುಖಂಡರಾದ ಶ್ರೀಮತಿ ಸಾವಿತ್ರಿ ಮಳಗಿ,ಹಾವೇರಿ ಜಿಲ್ಲಾ ಉಸ್ತುವಾರಿ ಅಧ್ಯಕ್ಷರಾದ ಮಾರುತಿ ತಾಳೆ,
ಶ್ರೀಮತಿ ಗೀತಾ ಅರಳಲೇ ಮಠ,ಕುಂದಗೋಳ ತಾಲೂಕ ಮಹಿಳಾ ಸಮಿತಿಯ ತಾಲೂಕ ಅಧ್ಯಕ್ಷರಾದ ಶ್ರೀಮತಿ ಫರೀದಾ ಎಮ್ ನದಾಫ್ ಸೇರಿದಂತೆ ಅನೇಕ ಕರವೇ ಕಾರ್ಯಕರ್ತರು ಹಾಗೂ ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್




















