ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಗಸ್ತ್ಯ ಫೌಂಡೇಶನ್ ಹಾಗೂ ಪ್ರೌಢಶಾಲೆ ಹೋತಪೇಟ ಅಡಿಯಲ್ಲಿ ವಿಜ್ಞಾನ ಕಾರ್ಯಕ್ರಮ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೋತಪೇಟ ಪ್ರೌಢಶಾಲೆಯಲ್ಲಿ ಅಗಸ್ತ್ಯ ಫೌಂಡೇಶನ್ ಸಂಚಾರಿ ಮತ್ತು ಹೋತಪೇಟ ಕೃಷಿ ಪೇಟ ವಿಜ್ಞಾನ ಕ್ಲಬ್ ಅಡಿಯಲ್ಲಿ ದಿನಾಂಕ 9/8/2023 ರಂದು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಜರಗಿತು.
ಸುಮಾರು 20 ಮಾದರಿಗಳು ಪ್ರದರ್ಶಿಸಲ್ಪಟ್ಟವು. ಕಲಿಕೆಗೆ ಪೂರಕವಾದ,ಸೃಜನಶೀಲ,ಕ್ರಿಯಾತ್ಮಕ ಕುತೂಹಲಕಾರಿಯಾದ ಪ್ರಯೋಗಾತ್ಮಕ ಕಲಿಕೆಗೆ ಪ್ರೇರಣೆಯಾದ ಪ್ರದರ್ಶನ ಇದಾಗಿತ್ತು ಈ ಕಾರ್ಯಕ್ರಮದ ಉದ್ಘಾಟಕರಾದ ಶ್ರೀ ಮಲ್ಲಣ್ಣ ಹುಲಿಕಲ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಅಗಸ್ತ್ಯ ಫೌಂಡೇಶನ್ ಅವರು ಎರಡು ದಿನಗಳವರೆಗೆ ಶಾಲೆಗೆ ಬಂದು ತಯಾರಿ ಮಾಡಿದ್ದು ತುಂಬಾನೇ ಸಹಕಾರಿಯಾಗಿತ್ತು ಅಧ್ಯಕ್ಷ ಸ್ಥಾನವನ್ನು ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಚನ್ನಬಸವರಾಜೇಶ್ವರಿ ವಹಿಸಿಕೊಂಡಿದ್ದರು.ಈ ಪ್ರದರ್ಶನವನ್ನು ಸ್ಥಳೀಯ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಕೌತುಕದಿಂದ ವೀಕ್ಷಿಸಿದರು.ಈ ಸಂದರ್ಭದಲ್ಲಿ ಅಗಸ್ತ್ಯ ಫೌಂಡೇಶನ್ ಶಿಕ್ಷಕರಾದ ಶ್ರೀ ಭಾಷಾ ಪಟೇಲ್ ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು ಕಾರ್ಯಕ್ರಮದ ನಿರೂಪಣೆಯನ್ನು ವಿಜ್ಞಾನ ಶಿಕ್ಷಕಿಯರಾದ ಶ್ರೀಮತಿ ಸವಿತಾ.ಎಸ್. ನಿರ್ವಹಿಸಿದರು.ಒಟ್ಟಾರೆ ಹೋತಪೇಟ ಶಾಲಾ ಮಕ್ಕಳಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳ ಅದ್ದೂರಿಯಾಗಿ ಆಚರಿಸಲಾಯಿತು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ