ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪರಿಸರ ಸೇವೆಯಲ್ಲಿ ಅಮರೇಗೌಡ ಮಲ್ಲಾಪೂರ ಅವರ ಕಾರ್ಯ ತುಂಬಾ ಶ್ಲಾಘನೀಯ:ಚನ್ನಬಸವ ಹಿರೇಮಠ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಕಾರುಣ್ಯ ಆಶ್ರಮದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರು ತಮ್ಮ 35ನೇ ಹುಟ್ಟು ಹಬ್ಬವನ್ನು ಕಾರಣ್ಯ ಆಶ್ರಮದ ಶ್ರಮಜೀವಿಗಳಿಗೆ ಸನ್ಮಾನಿಸಿ,ಬಾಳೆಹಣ್ಣು ವಿತರಿಸಿ ಹಿರಿಯ ಜೀವಿಗಳಿಂದ ಆರ್ಶೀವಾದ ಪಡೆದರು.ಈ ಸಂದರ್ಭದಲ್ಲಿ ಕಾರುಣ್ಯ ಆಶ್ರಮದ ವತಿಯಿಂದ ಸನ್ಮಾನಿಸಿ ಸಸಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾರುಣ್ಯ ಆಶ್ರಮದ ಚನ್ನಬಸವ ಹಿರೇಮಠ ಅವರು ಮಾತನಾಡಿ ಪರಿಸರ ಸೇವೆ,ರಕ್ತದಾನ ಜೊತೆಗೆ ವಿವಿಧ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುವ ಅಮರೇಗೌಡ ಮಲ್ಲಾಪೂರ ಅವರ ಕಾರ್ಯ ತುಂಬಾ ಶ್ಲಾಘನೀಯ ಅವರು ಪರಿಸರ ಸೇವೆಯನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ ಸಿಂಧನೂರಿನ ಅಮರ ಶ್ರೀ ಆಲದ ಮರವನ್ನು ತಾಯಿ ಮಗುವಿನಂತೆ ಪೋಷಣೆ ಮಾಡಿದ್ದಾರೆ ಅವರ ಸೇವೆ ರಾಜ್ಯಾದ್ಯಂತ ನಿರಂತರವಾಗಿ ನಡೆಯಲಿ ಅವರು ಜೀವನದಲ್ಲಿ ದೇವರು ಸುಖ ಶಾಂತಿ ನೀಡಲಿ ಎಂದು ಆಶಿಸಿದರು. ಈ ಸಂದರ್ಭದಲ್ಲಿ ಕಾರುಣ್ಯ ಆಶ್ರಮದ ಚನ್ನಬಸವ ಹಿರೇಮಠ,ವನಸಿರಿ ಫೌಂಡೇಶನ್ ರಾಜ್ಯ ಕಾರ್ಯದರ್ಶಿ ಶರಣೇಗೌಡ ಹೆಡಗಿನಾಳ,ಅಕ್ಷಯ ಆಹಾರ ಜೋಳಿಗೆಯ ಅಶೋಕ ನಲ್ಲಾ,ನಾಗರಾಜ ಸಿಂಗಾಪುರ, ಸಹಕಾರ್ಯದರ್ಶಿ ರಂಜಾನ್ ಸಾಬ್,ಜಿಲ್ಲಾ ಜಾಲತಾಣದ ಅಧ್ಯಕ್ಷ ಚನ್ನಪ್ಪ ಕೆ ಹೊಸಹಳ್ಳಿ,ಮಸ್ಕಿ ತಾಲೂಕ ಅಧ್ಯಕ್ಷ ರಾಜು ಬಳಗಾನೂರ,ಮಾಧ್ಯಮ ಮಿತ್ರರಾದ ಶರಣಬಸವ ಚನ್ನಳ್ಳಿ,ಯಮನೂರ ಹಾಗೂ ಕಾರುಣ್ಯ ಆಶ್ರಮದ ಹಿರಿಯರು ಮುಂತಾದವರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ