ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ಟಿಇಟಿ ಅಣುಕು ಪರೀಕ್ಷೆ – ಕಷ್ಟಪಟ್ಟು ಓದುವುಕ್ಕಿಂದ ಇಷ್ಟಪಟ್ಟು ಓದುವುದು ಅವಶ್ಯಕ”– ಡಾ. ಮಲ್ಲಿಕಾರ್ಜುನ ಸಿ. ಕನಕಟ್ಟೆ ಅಭಿಮತ

ಹೈ.ಕ.ಶಿ. ಸಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ, ಬೀದರನಲ್ಲಿ 

ದಿನಾಂಕ : ೨೯-೦೮-೨೦೨೩ರಂದು ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಟಿಇಟಿ ಅಣುಕು ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಮಹಾವಿದ್ಯಾಲಯದ ೯೦ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಪ್ರಾಂಶುಪಾಲರಾದ ಡಾ. ಮಲ್ಲಿಕಾರ್ಜುನ ಸಿ. ಕನಕಟ್ಟೆ ಅವರು ಮಾತನಾಡಿ ವಿದ್ಯಾರ್ಥಿಗಳು ಅಭ್ಯಾಸದ ಜೊತೆಗೆ ಉನ್ನತ ಮಟ್ಟದ ಗುರಿ ಇಟ್ಟುಕೊಂಡಿರಬೇಕು ಹಾಗೂ ಆ ಗುರಿಯನ್ನು ಪೂರ್ಣಗೊಳಿಸುವ ಹಾದಿ ಕೂಡ ತಿಳಿದಿರಬೇಕು, ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥಮಾಡಿಕೊಳ್ಳದೇ ಸದುಪಯೋಗಪಡಿಸಿಕೊಳ್ಳಬೇಕು ಏಕೆಂದರೆ ಕಳೆದು ಹೋದ ಸಮಯ ಮತ್ತೆ ಬರುವುದಿಲ್ಲ. ನಾವು ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ವಿದ್ಯಾಭ್ಯಾಸವನ್ನು ಆಸಕ್ತಿಯಿಂದ ಕಲಿತಾಗ ಸಾಧನೆ ಗೈಯಲು ಸಾಧ್ಯವೆಂದು ಹೇಳಿದರು.
ಕಾರ್ಯಕ್ರಮವನ್ನು ಸಂತೋಷಕುಮಾರ ಸಜ್ಜನ ಅವರು ಆಯೋಜಿಸಿದರು. ಮಹಾವಿದ್ಯಾಲಯದ ಉಪನ್ಯಾಸಕರಾದ ವೀಣಾ ಜಲಾದೆ, ರಾಜಕುಮಾರ ಸಿಂಧೆ, ಶಿಲ್ಪಾ ಹಿಪ್ಪರಗಿ, ಪಾಂಡುರಂಗ ಕುಂಬಾರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ-ಸಾಗರ್ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ