ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಂಗ್ಲೆ ಮಲ್ಲಿಕಾರ್ಜುನ್ ಅವರ 56 ನೇ ಹುಟ್ಟು ಹಬ್ಬದ ಪ್ರಯುಕ್ತ ಹಾಲು,ಬಿಸ್ಕೆಟ್ ಹಂಚಿಕೆ

ಲಿಂಗಸಗೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರು ಆದ
ಡಾ|| ಬಂಗ್ಲೆ ಮಲ್ಲಿಕಾರ್ಜುನ್ ಬೆಂಗಳೂರು ಇವರ ಜನ್ಮದಿನದ ಪ್ರಯುಕ್ತ.
ಇಂದು ಲಿಂಗಸುಗೂರು ತಾಲೂಕ ಅಧ್ಯಕ್ಷರಾದ ಶ್ರೀನಿವಾಸ್ ಮಧುಶ್ರೀ ಹಟ್ಟಿ ಚಿನ್ನದ ಗಣಿ ಇವರ ನೇತೃತ್ವದಲ್ಲಿ. ಲಿಂಗಸಗೂರು ತಾಲೂಕಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು ಇಂದು ಲಿಂಗಸಗೂರಿನ ಸರಕಾರಿ ಆಸ್ಪತ್ರೆಯಲ್ಲಿರುವ ನೂರಕ್ಕೂ ಹೆಚ್ಚು ಒಳ ರೋಗಿಗಳಿಗೆ ಹಾಲು ಬಿಸ್ಕೆಟ್ ಹಂಚುವ ಮೂಲಕ ರಾಜ್ಯಾಧ್ಯಕ್ಷರ ಜನ್ಮದಿನವನ್ನು ಆಚರಣೆ ಮಾಡಲಾಯಿತು.
ಆಸ್ಪತ್ರೆಯ ವೈದ್ಯಾಧಿಕಾರಿ ಖಾಜಾ ಹುಸೇನ್ ಹಟ್ಟಿ ಚಿನ್ನದ ಗಣಿ ಇವರು ಪತ್ರಕರ್ತರೊಂದಿಗೆ ಜೊತೆಗೂಡಿ ರೋಗಿಗಳಿಗೆ ಹಾಲು ಬಿಸ್ಕೆಟ್ ಹಂಚಲು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ನಂತರ ಮಾತನಾಡಿದ ಅವರು ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷರ ಹುಟ್ಟು ಹಬ್ಬದ ಶುಭಾಶಯಗಳು ತಿಳಿಸುತ್ತಾ. ದೇವರು ಅವರಿಗೆ ಆರೋಗ್ಯ ಐಶ್ವರ್ಯ ಕೊಡಲಿ ಹಾಗೂ ಪತ್ರಕರ್ತರ ಹೇಳಿಕೆಗಾಗಿ ದುಡಿಯುವ ಶಕ್ತಿ ಕೊಡಲೆಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ಲಿಂಗಸಗೂರು ತಾಲೂಕ ಅಧ್ಯಕ್ಷರು ಶ್ರೀನಿವಾಸ ಮಧುಶ್ರೀ ಮಾತನಾಡಿ ಆ ಭಗವಂತ ನೊಂದ ಪತ್ರಕರ್ತರ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ದೇವರ ಸ್ವರೂಪದಲ್ಲಿ ಬಂದ ಬಂಗ್ಲೆ ಮಲ್ಲಿಕಾರ್ಜುನ್ ಇವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು ತಿಳಿಸಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ
ಕಾನಿಪ ಧ್ವನಿ ಉಪಾಧ್ಯಕ್ಷರಾದ ಕುಬೇರ್ ನಗನೂರು, ಅಬ್ದುಲ್ ರಶೀದ್, ವಿಜ್ಞೇಶ್ ನಗನೂರು, ಯೋಗಪ್ಪ ದೊಡ್ಮನಿ, ಶಿವಕುಮಾರ್ ನಾಯಕ್, ಹಾಗು ಆಸ್ಪತ್ರೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ