ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಶ್ವ ಕರ್ಮ ಜಯಂತಿ ಪೂರ್ವಭಾವಿ ಸಭೆ

ಹನೂರು ತಾಲೂಕಿನ ಲೋಕೋಪಯೋಗಿ ಅತಿಗಣ್ಯವ್ಯಕ್ತಿ ಅತಿಥಿ ಗೃಹದಲ್ಲಿ ಇಂದು ವಿಶ್ವ ಕರ್ಮ ಜಯಂತಿ ಪೂರ್ವಭಾವಿ ಸಭೆ ಜರುಗಿತು.
ವಿಶ್ವ ಕರ್ಮ ಜಯಂತಿಯನ್ನು ಅ.1ರಂದು ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ ಅರ್ಥಪೂರ್ಣ ಆಚರಣೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹನೀಯರ ಹಾಗೂ ಹಿರಿಯರ ಗೌರವಿಸುವುದು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಇದೀಗ ವಿಶ್ವಕರ್ಮ ಜಯಂತಿಯನ್ನು ಸಹ ಆಚರಣೆ ಮಾಡಲಾಗುತ್ತಿದ್ದು ಸಮುದಾಯದ ಮುಖಂಡರುಗಳ ಜೊತೆ ಚರ್ಚೆ ನಡೆಸಿ ಅಕ್ಟೋಬರ್ 1ರಂದು ದಿನಾಂಕ ನಿಗದಿಪಡಿಸಲಾಗಿದೆ ಅಂದು ಬೆಳಿಗ್ಗೆ 9ಗಂಟೆಗೆ ಆರ್.ಎಂ.ಸಿ ಆವರಣದಲ್ಲಿ ಚಾಲನೆ ನೀಡಲಾಗುವುದು ಬಳಿಕ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಪಟ್ಟಣದಲ್ಲಿ ವೇದಿಕೆ ಕಾರ್ಯಕ್ರಮ ಮೂಲಕ ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದರು.
ಜಯಂತಿಯಲ್ಲಿ ಯಾವುದೇ ರೀತಿಯ ಲೋಪದೋಷವಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ನಡೆಸಬೇಕು ಇದಕ್ಕಾಗಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಇದೆ ವೇಳೆ ಸೂಚನೆ ನೀಡಿದರು.
ಸಭೆಯಲ್ಲಿ ತಹಸೀಲ್ದಾರ್ ಗುರು ಪ್ರಸಾದ್, ಸಿ.ಡಿ.ಪಿ.ಒ ನಂಜಮಣಿ ಗ್ರಾಮ ಲೆಕ್ಕ ಆಡಳಿತ ಅಧಿಕಾರಿ ಶೇಷಣ್ಣ,ದೈಹಿಕ ಪರಿವೀಕ್ಷಕ ಮಹದೇವ್, ಅಗ್ನಿ ಶಾಮಕ ದಳ ಸಿಬ್ಬಂದಿ ಮಹೇಶ್,ಮುಖಂಡರಾದ ಮುತ್ತು,ವೀರಚಾರಿ, ಆರ್.ರಾಚಪ್ಪಾಜಿ,ತಮ್ಮಯಚಾರಿ,ಮುತ್ತುರಾಜು, ದೊರೆ,ರಾಮಾಚಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ