ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೈ ಭಾರತ್ ಮಾತಾ ಸೇವಾ ಸಮಿತಿಯಿಂದ ಅದ್ದೂರಿಯಾಗಿ ಕಲ್ಯಾಣ ಕರ್ನಾಟಕ ದಿನ ಆಚರಣೆ

ಬೀದರ್: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪ್ರಯುಕ್ತ ಜೈ ಭಾರತ್ ಮಾತಾ ಸೇವಾ ಸಮಿತಿ ಬೀದರ್ ಜಿಲ್ಲಾ ಘಟಕ ವತಿಯಿಂದ ಅದ್ದೂರಿ ಕಲ್ಯಾಣ ಕರ್ನಾಟಕ ಉತ್ಸವ ದೇಶಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ವೀರ ದೇಶಭಕ್ತರ ಭಾವಚಿತ್ರಗಳು ಮೆರವಣಿಗೆಯನ್ನು ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು.ಇದಕ್ಕಿಂತ ಮುಂಚೆ ವೇದಿಕೆ ಕಾರ್ಯಕ್ರಮವು ನಡೆಯಿತು ವೇದಿಕೆ ಮೇಲೆ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಹವಾ ಮಲ್ಲಿನಾಥ್ ಮಹಾರಾಜರು ನಿರುಗುಡಿ ಸಮಿತಿಯ ರಾಷ್ಟ್ರೀಯ ಸಂಸ್ಥಾಪಕರು ವಹಿಸಿದ್ದರು. ಅತಿಥಿಗಳಾಗಿ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀ ಶೈಲೇಂದರ ಬೆಲ್ದಳೆ ಅವರು ವಹಿಸಿದ್ದರು. ಹಾಗೂ ಸಮಿತಿಯ ರಾಷ್ಟ್ರೀಯ ವಕ್ತಾರ ಶ್ರೀ ವೈಜಿನಾಥ ಝಳಕೆ,ಸಮಿತಿಯ ಭಾಲ್ಕಿ ತಾಲೂಕು ಅಧ್ಯಕ್ಷರಾದ ಶ್ರೀ ಪಪ್ಪು ಪಾಟೀಲ್ ಖಾನಾಪುರ ಇದ್ದರು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸದಸ್ಯರಿಗೆ ಸನ್ಮಾನ್ಯ ಕಾರ್ಯಕ್ರಮವನ್ನು ಇದೇ ವೇದಿಕೆ ಮೇಲೆ ನಡೆಯಿತು ತದನಂತರ ಮೆರವಣಿಗೆಯು ಬೀದರನ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮಲ್ಕಾಪುರ ಆಶ್ರಮದಲ್ಲಿ ಕೊನೆಗೊಂಡಿತು ಅಲ್ಲಿ ಬಂದಂತಹ ಎಲ್ಲಾ ಭಕ್ತಾದಿಗಳಿಗೂ ಪ್ರಸಾದ ವ್ಯವಸ್ಥೆಯನ್ನು ಮಾಡಲಾಯಿತು ಇದೇ ಸಂದರ್ಭದಲ್ಲಿ ಸಮಿತಿಯ ಭಾಲ್ಕಿ ತಾಲೂಕು ಅಧ್ಯಕ್ಷರಾದ ಶ್ರೀ ಪಪ್ಪು ಪಾಟೀಲ್ ಖಾನಾಪುರ್ ಅವರನ್ನು ನಮ್ಮ ವರದಿಗಾರರು ಸಂಪರ್ಕಿಸಿದಾಗ ಪರಮ ಪೂಜ್ಯರು ನಡೆಸಿಕೊಡುವಂತಹ ಈ ಒಂದು ದೇಶ ಭಕ್ತಿಯ ಜಾಗೃತಿ ಮೂಡಿಸುವಂತಹ ಕಾರ್ಯವು ನಿಜಕ್ಕೂ ಬೆಲೆಕಟ್ಟಲಾಗದಂತಹದು ಅವರು ಈ ನಮ್ಮ ದೇಶಕ್ಕೆ ಅಮೂಲ್ಯ ಕೊಡುಗೆ ಎಂದು ಹೇಳಲು ಇಚ್ಛಿಸುತ್ತೇನೆ ಈ ಸಂದರ್ಭದಲ್ಲಿ ಸ್ವತಂತ್ರ ಹೋರಾಟಗಾರರನ್ನು ಸ್ಮರಿಸುವುದು ನಮ್ಮ ಜವಾಬ್ದಾರಿ ಎಂದು ಪೂಜ್ಯರು ತಿಳಿಸಿಕೊಟ್ಟಿದ್ದಾರೆ. ಇದರಿಂದ ನಾವು ಪರಮ ಪೂಜ್ಯರಿಗೆ ಸದಾ ಚಿರಋಣಿಗಳಾಗಿದ್ದೇವೆ ಎಂದು ಹೇಳಲು ಸಂತೋಷ ಪಡುತ್ತೇನೆ.
ವರದಿ-ಮಹಾನ್ ಕೋಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ