ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಗತ್ತಿನ ಸೃಷ್ಟಿಕರ್ತ ಶ್ರೀ ವಿಶ್ವಕರ್ಮರ ಜಯಂತೋತ್ಸವ ಆಚರಣೆ

ಕಲಬುರಗಿ:ಜಿಲ್ಲಾಡಳಿತ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಜಗತ್ತಿನ ಸೃಷ್ಟಿಕರ್ತ ಶ್ರೀ ವಿಶ್ವಕರ್ಮರ ಜಯಂತೋತ್ಸವವನ್ನು ಆಚರಿಸಲಾಯಿತು.
ಕಲಬುರಗಿ ನಗರದಲ್ಲಿನ ಶ್ರೀ ಎಸ್ ಎಮ್ ಪಂಡಿತ ರಂಗ ಮಂದಿರದಲ್ಲಿ ಭಾನುವಾರ ನಡೆದ ವಿಶ್ವಕರ್ಮ ಜಯಂತೋತ್ಸವದಲ್ಲಿ ವೇದಿಕೆ ಮೇಲಿರುವ ಅತಿಥಿ ಗಣ್ಯರು ಶ್ರೀ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಇದೇ ವೇಳೆ ದಿವ್ಯ ಸಾನಿಧ್ಯ ವಹಿಸಿದಂತಹ ಪರಮಪೂಜ್ಯ ಶ್ರೀ ದೊಡ್ಡೇಂದ್ರ ಮಹಾಸ್ವಾಮೀಜಿಗಳು ವಿಶ್ವಕರ್ಮರ ಏಕದಂಡಗಿ ಮಠ ಸುಲೇಪೇಠ ಅವರು ಮಾತನಾಡಿ ವಿಶ್ವ ಎಂದರೆ ಜಗತ್ತು,ಕರ್ಮ ಎಂದರೆ ಕೆಲಸ ಜಗತ್ತಿನಲ್ಲಿ ಎಲ್ಲಾ ಕೆಲಸಗಳು ಮಾಡಿಕೊಂಡು ಬಂದಿರುವವರು ಈ ಸಮಾಜದವರು ವಿಶ್ವಕರ್ಮ ಎಂದ ಕೂಡಲೇ ಬಡಿಗ,ಕಂಬಾರ,ಅಕ್ಕಸಾಲಿಗ,ಕಂಚುಗಾರ,ಶಿಲ್ಪಿ ಈ ಪಂಚವೃತ್ತಿ ಕೆಲಸ ಮಾಡುವವರೇ ದೇವರು ಎಂದು ಸಾಮಾನ್ಯವಾಗಿ ಎಲ್ಲರಿಗೂ ಅನ್ನಿಸುತ್ತದೆ,ಆದರೆ ವಿಶ್ವಕರ್ಮನನ್ನು ದೇವರ ಸೃಷ್ಟಿಕರ್ತ ಎಂದು ಕರೆಯುತ್ತೇವೆ ವಿಶ್ವದಲ್ಲಿರುವ ಎಲ್ಲಾ ದೇವಾದಿ ದೇವತೆಗಳಿಂದ ತಂದೆ ಎಂದು ಕರೆಸಿಕೊಳ್ಳುತ್ತಾನೆ ವಿಶ್ವಕರ್ಮ ಎಂದರು.
ಈ ಸಂದರ್ಭದಲ್ಲಿ ಶ್ರೀ ಶ್ರೀ ಶ್ರೀ ಮೂರುಜಾವದೇಶ್ವರ ಏಕದಂಡಗಿ ಮಠದ ಶ್ರೀ ದೊಡ್ಡೇಂದ್ರ ಮಹಾಸ್ವಾಮೀಜಿಗಳು,ಶ್ರೀ ಶ್ರೀ ಶ್ರೀ ಪ್ರಣವ ನಿರಂಜನ ಮಹಾಸ್ವಾಮೀಜಿ,ಶ್ರೀ ವೀರಣ್ಣ ಮುತ್ಯ, ಮೌನೇಶ್ವರ ದೇವಸ್ಥಾನದ ಅರ್ಚಕರಾದ ಶ್ರೀ ಶಿವರಾಜ ಶಾಸ್ತ್ರೀ,ಕಲಬುರಗಿಯ ಶ್ರೀ ವಿಶ್ವಕರ್ಮ ಸಮಿತಿಯ ಅಧ್ಯಕ್ಷ ವೀರೇಶ ಬಡಿಗೇರ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ವರದಿ:ಅಪ್ಪಾರಾಯ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ