ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಗದ ಮೊದಲ ಶಿಲ್ಪಿ ವಿಶ್ವಕರ್ಮ ಜಯಂತಿ ಆಚರಣೆ

ಹನೂರು:ಸಂಘಟನೆ ಮತ್ತು ಹೋರಾಟದಿಂದ ಮಾತ್ರ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾದ್ಯ ಶಾಸಕ ಎಂ.ಆರ್ ಮಂಜುನಾಥ್
ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಹನೂರು ಶಾಸಕ ಮಂಜುನಾಥ್ ಜಗದ ಮೊದಲ ಶಿಲ್ಪಿ ವಿಶ್ವಕರ್ಮ ಜಯಂತಿ ಆಚರಣೆಯು ಸಂತಸ ಮೂಡಿಸಿದೆ ಪುರಾತನ ಕಾಲದಿಂದಲೂ ಭಾರತ ತನ್ನದೇ ಆದ ಸಂಸ್ಕೃತಿ ಮತ್ತು ವೈವಿಧ್ಯತೆಯನ್ನು ಉಳಿಸಿಕೊಂಡು ಬಂದಿದೆ ಲೋಹದಿಂದ ಆಯುಧಗಳನ್ನು ಮತ್ತು ಒಡವೆಗಳನ್ನು ತಯಾರಿಸಲು ಮತ್ತು ಕುಶಲಕಲೆಗೆ ಮೂಲ ಕಾರಣ ಪುರುಷ ವಿಶ್ವಕರ್ಮರಾಗಿದ್ದಾರೆ ಈ ಸಮುದಾಯಗಳ ಸಾಮಾಜಿಕ ನ್ಯಾಯ ಸರ್ಕಾರದ ಸೋವ್ಲಭ್ಯಗಳನ್ನು ಕೊಡಿಸುವಲ್ಲಿ ಕೆ ಪಿ ನಂಜುಂಡಿ ಅವರ ಹೋರಾಟಕ್ಕೆ ಮತ್ತು
ಕಾರ್ಯವೈಖರಿ ಮೆಚ್ಚುವಂಥದ್ದಾಗಿದೆ ಎಂದು ತಿಳಿಸಿದರು.
ತಮ್ಮದೆ ಕುಲಕಸುಬನ್ನು ಮಾಡುವುದರ ಮೂಲಕ ಶಿಕ್ಷಣಕ್ಕೂ ಅಷ್ಟೇ ಒತ್ತು ನೀಡುವಂತೆ ಕೆಲಸ ಮಾಡಬೆಕೆಂಬುದನ್ನು ತಿಳಿಸಿದರು.
ಇದಕ್ಕೂ ಮೊದಲು ಪಟ್ಟಣದ ಮುಖ್ಯರಸ್ತೆಯಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಬೆಳ್ಳಿ ರಥದಲ್ಲಿ ವಿಶ್ವಕರ್ಮ ಭಾವಚಿತ್ರವನ್ನು ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಅಖಿಲ ಕರ್ನಾಟಕ ವಿಶ್ವಕರ್ಮ ಕಾರ್ಯಧ್ಯಕ್ಷ ಪಿ.ನಂಜುಂಡಿ ತಹಸಿಲ್ದಾರ್ ಗುರುಪ್ರಸಾದ್,ಇ ಓ ಉಮೇಶ್,ಪಟ್ಟಣ ಪಂಚಾಯತಿ ಸದಸ್ಯರಾದ ಹರೀಶ್ ಗಿರೀಶ್ ಸಂಪತ್ ಕುಮಾರ್ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಮೂರ್ತಿ ವಿಶ್ವಕರ್ಮ ಮಹಿಳಾ ಘಟಕದ ರಾಜ್ಯ ಅಧ್ಯಕ್ಷ ಸೌಭಾಗ್ಯ,ಸ್ಥಳೀಯ ಮುಖಂಡರಾದ
ಡಾ.ನಾಗಲಿಂಗಪ್ಪ ಇತರರು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ