ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಶ್ವಕರ್ಮ ದೇವರ ಭಾವಚಿತ್ರಕ್ಕೆ  ಪುಷ್ಪಾರ್ಚನೆ

ಚಾಮರಾಜನಗರ ಹನೂರು ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೇರಿದ ಬೈರನತ್ತ ಗ್ರಾಮದಲ್ಲಿ ವಿಶ್ವಕರ್ಮ ದೇವರ ಭಾವಚಿತ್ರಕ್ಕೆ  ವಿಶ್ವಕರ್ಮ ಜನಾಂಗದ ಮುಖಂಡರು ಮಹಿಳೆಯರು ಹಾಗೂ ಯುವಕರು ಪುಷ್ಪಾರ್ಚನೆ ನೆರವೇರಿಸಿ ಸಿಹಿ ಹಂಚಿ ಸಂಭ್ರಮಿಸಿದರು.ವಿಶ್ವಕರ್ಮ ನಿಗಮ ಮಂಡಳಿ ನಾಮ ನಿರ್ದೇಶಕ ಶ್ರೀನಿವಾಸ್ ರವರು ಮಾತನಾಡಿ ಅಮರ ಶಿಲ್ಪಿ ಜಕಣಾಚಾರಿ ಜಯಂತೋತ್ಸವನ್ನು ಮಾಜಿ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪನವರು ಅಧಿಕಾರ ಅವಧಿಯಲ್ಲಿ  ಜಾರಿಗೆ ತಂದಿದ್ದರು ಸಿದ್ದರಾಮಯ್ಯನವರು ಮುಖ್ಯಮಂತ್ರಿ ಅಧಿಕಾರ ಅವಧಿಯಲ್ಲಿ ಆಗಿದ್ದ ಸಂದರ್ಭದಲ್ಲಿ ವಿಶ್ವಕರ್ಮ ನಿಗಮ ಮಂಡಳಿಯನ್ನು ಸ್ಥಾಪಿಸಿಕೊಟ್ಟಿದ್ದರು.ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ದೇಶದಲ್ಲಿರುವ  ವಿಶ್ವಕರ್ಮ ಜನಾಂಗದ ಕುಲ ಕಸುಬುಗಳಿಗೋಸ್ಕರ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಒಂದು ಲಕ್ಷದವರೆಗೆ 30 ಪೈಸಾ ಬಡ್ಡಿ ದರದಲ್ಲಿ ನಮ್ಮ ಸಮುದಾಯ ಜನರ ಏಳಿಗೆಗಾಗಿ ಕಲ್ಪಿಸಿಕೊಟ್ಟಿದರು ಮತ್ತು ಇನ್ನೂ ಅನೇಕ ಸೌಲಭ್ಯಗಳನ್ನು ಕಲ್ಪಿಸಿ ಕೊಟ್ಟಿದ್ದರು ನಮ್ಮ ಸಮುದಾಯಗಳ ಸಾಮಾಜಿಕ, ಆರ್ಥಿಕ,ಶೈಕ್ಷಣಿಕ ಹಾಗೂ ಇನ್ನಿತರ ಸೌಲಭ್ಯಗಳನ್ನು ಕೊಡಿಸುವಲ್ಲಿ ಹಾಗೂ ನಮ್ಮ ಸಮುದಾಯದವರು ಮುಖ್ಯ ವಾಹಿನಿಗೆ ತರಲಿಕ್ಕೆ ಕರ್ನಾಟಕ ವಿಶ್ವಕರ್ಮ ಮಹಾಸಭಾ ಅಧ್ಯಕ್ಷರ ಕೆಪಿ ನಂಜುಂಡಿ ಅವರ ಪಾತ್ರ ಬಹಳ ಮುಖ್ಯವಾಗಿದ್ದು ಪ್ರತಿಯೊಂದು ಹಳ್ಳಿ ಹಳ್ಳಿಯಿಂದ ನಮ್ಮ ಸಮಾಜದ ಸಂಘಟನೆ ಹೆಚ್ಚು ಹೊತ್ತು ನೀಡುತ್ತಿದ್ದಾರೆ ನಮ್ಮ ಜನ ಕಷ್ಟ ಸುಖ ದುಃಖಗಳಿಗೆ ಭಾಗಿಯಾಗುತ್ತಿದ್ದಾರೆ ನಮ್ಮ ಮಕ್ಕಳ ವಿದ್ಯಾಭ್ಯಾಸ ಹೆಚ್ಚು ಹೊತ್ತು ನೀಡಿದ್ದಾರೆ ಎಂದರು  ಇದೇ ಸಂದರ್ಭದಲ್ಲಿ ವಿಶ್ವಕರ್ಮ ಜನಾಂಗದ ಚಾಮರಾಜನಗರ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಬೈರನತ್ತ ರಾಜಪ್ಪ ಮಣ ಗಳ್ಳಿ,ಗ್ರಾಮ ಪಂಚಾಯಿತಿ ಸದಸ್ಯರಾದ ಲತಾ ರಾಜಪ್ಪ ಚಾರಿ,ವಿಶ್ವಕರ್ಮ ಜನಾಂಗದ ಮುಖಂಡರುಗಳಾದ ಸಿದ್ದಾಚಾರಿ,ರಾಜಪ್ಪ ಚಾರಿ,ಮಹದೇವಪ್ಪ ಚಾರಿ,ಮಲ್ಲಪ್ಪ,ಸಿದ್ದಮಲ್ಲಪ್ಪ ಮಹಿಳೆಯರು ಯುವಕರು ಹಾಗೂ ಇನ್ನಿತರರು ಹಾಜರಿದ್ದರು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ