ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕ ಹಾಗೂ ಯುವ ಮಿತ್ರರ ಸಂಯುಕ್ತಾಶ್ರಯದಲ್ಲಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಅವರ ಸಹಯೋಗದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ದಿವ್ಯ ಸಾನಿಧ್ಯವನ್ನು ವಹಿಸಿದ ಶ್ರೀ ಅಭಿನವ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳು ಹಿರೇಮಠ ಮನಗೂಳಿ ಅವರು ಮಾತನಾಡಿ ರಕ್ತದಾನ ಶಿಬಿರ ಅಮೂಲ್ಯವಾದದ್ದು ಜಗತ್ತು ಎಷ್ಟೇ ಮುಂದುವರೆದರೂ ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ ಆದ ಕಾರಣ ರಕ್ತದಾನವೆನ್ನುವುದು ಒಂದು ಜೀವ ಉಳಿಸುವ ಕಾರ್ಯವಾಗಿದೆ ಎಂದು ಹೇಳಿದರು.
ಈ ಶಿಬಿರ ಕಾರ್ಯಕ್ರಮದಲ್ಲಿ ಗ್ರಾಮಸ್ಥರಾದ ಬಸಪ್ಪ ದೊಡಮನಿ,ಸೋಮು ಸಜ್ಜನ,ಗುಂಡು ಶಿಂಧೆ, ರಬ್ಬಾನಿ ಇನಾಮದಾರ,ಪ್ರಶಾಂತ ಬಡಿಗೇರ, ವಿಶ್ವನಾಥ ತಡಲಗಿ,ರಾಹುಲ ಕಲಗೊಂಡ, ಇಮ್ತಿಯಾಜ ಪಟೇಲ,ಮೈಬು ಕಲಾದಗಿ,ನಾಗು ಯಲಗಟ್ಟಿ,ಯಾಸಿನ ಕರೋಶಿ,ಡಾ.ಬಸವರಾಜ ಕಮದಾಳ,ಡಾ.ಶಿವಾನಂದ ಗುಂಡೊಳ್ಳಿ,ಸಂತೋಷ ಕಳಸಗೊಂಡ,ಸಂತೋಷ ಗಣಾಚಾರಿ,ವಿಶ್ವ ಹಿರೊಡಗಿ,ಸುನೀಲ ಶೇಳಕೆ ಹಾಗೂ ಗ್ರಾಮದ ಹಿರಿಯರು,ಯುವ ಮಿತ್ರರು,ಆಶಾ ಕಾರ್ಯಕರ್ತೆಯರು,ಸಿಬ್ಬಂದಿಗಳು ಉಪಸ್ಥಿತರಿದ್ದರು.ಶಿಬಿರದಲ್ಲಿ 30ಕ್ಕೂ ಹೆಚ್ಚು ಜನ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ